ಮೈಸೂರು

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು

ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ ಮತ್ತು ಮದ್ಯ – ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘ ಹಾಗೂ ಬಸವ ಧರ್ಮ ಜ್ಞಾನ ಪೀಠದ ಅಧ್ಯಕ್ಷರಾದ ಶ್ರೀ ದಯಾನಂದ ಸ್ವಾಮೀಜಿಯವರು ಅವರು ಪ್ರತಿಪಾದಿಸಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ತಾಲ್ಲೂಕಿನ ಸುಪ್ರಸಿದ್ಧ ಕಪ್ಪಡಿ ಜಾತ್ರಾ ಮಹೋತ್ಸ ಹಿನ್ನೆಲೆಯಲ್ಲಿ ಪ್ರಾಣಿಬಲಿ ನಿಷೇಧ ಕುರಿತು ಪತ್ರಿಕಾಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸುಮಾರು 36,000 ದೇವಾಲಯಗಳು ಒಳಪಡುತ್ತವೆ. ನಾನು ಕರ್ನಾಟಕ ಮಾತ್ರವಲ್ಲದೆ ದೇಶದ ಎಲ್ಲಾ ರಾಜ್ಯಗಳಿಗೂ ಹಾಗೂ ನಮ್ಮ ಪಕ್ಕದ ನೇಪಾಳ ದೇಶಕ್ಕೂ ಭೇಟಿ ನೀಡಿ ಅಲ್ಲಿಯೂ ಪ್ರಾಣಿ ಬಲಿ ನಿಷೇಧಿಸುವಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ಕೆಆರ್ ನಗರ ತಾಲ್ಲೂಕಿನ ಕಪ್ಪಡಿಯ ಶ್ರೀ ರಾಚಪ್ಪಾಜಿ ಜಾತ್ರೆಯು ಶಿವರಾತ್ರಿಯಿಂದ ಆರಂಭಗೊಂಡಿದ್ದು, ಯುಗಾದಿಯವರೆಗೆ ಜರುಗಲಿದೆ. ಸುಮಾರು ಒಂದು ತಿಂಗಳ ಕಾಲ ನಡೆಯುವ ಈ ಜಾತ್ರೆಗೆ ಸಹಸ್ರಾರು ಭಕ್ತರು ಆಗಮಿಸಿ ದೇವರಿಗೆ ಪೂಜಾದಿ ಧಾರ್ಮಿಕ ಸೇವಾ ಕೈಂಕರ್ಯಗಳನ್ನು ಸಲ್ಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಭಕ್ತರು ದೇವರು ಮತ್ತು ಧರ್ಮದ ಹೆಸರಿನಲ್ಲಿ ಹರಕೆಯ ರೂಪದಲ್ಲಿ ಆಡು, ಕುರಿ, ಕೋಳಿ ಮುಂತಾದ ಪ್ರಾಣಿಗಳ ಬಲಿ ನೀಡಲಿದ್ದು, ಇದು ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಭಂದಕ ಅಧಿನಿಯಮ 1959 ಮತ್ತು ನಿಯಮಗಳು 1963 ಹಾಗೂ ತಿದ್ದುಪಡಿ ಕಾಯ್ದೆ 1975ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈ ಪ್ರಾಣಿಬಲಿಯನ್ನು ಮೇಲ್ಕಂಡ ಕಾನೂನು ಹಾಗೂ ಹೈ ಕೋರ್ಟ್ ಆದೇಶಗಳ ಅಡಿಯಲ್ಲಿ ಸಂಪೂರ್ಣವಾಗಿ ತಡೆಗಟ್ಟಬೇಕು ಹಾಗೂ ಪ್ರಾಣಿಗಳನ್ನು ಜಾತ್ರಾ ಪರಿಸರಕ್ಕೆ ಬಾರದಂತೆ ಕಟ್ಟೆಚ್ಚರ ವಹಿಸಬೇಕೆಂದು ಕರ್ನಾಟಕ ಸರ್ಕಾರ, ಮೈಸೂರು ಜಿಲ್ಲಾಡಳಿತ ಮತ್ತು ಕೆಆರ್ ನಗರ ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಶಿವರಾತ್ರಿಯಿಂದ ಇಲ್ಲಿಯವರೆಗೂ ಮೈಸೂರು ಜಿಲ್ಲಾಡಳಿತ, ಕೆಆರ್ ನಗರ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯು ಕಪ್ಪಡಿ ಜಾತ್ರೆಯಲ್ಲಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಿಬಲಿ ನಡೆಯದಂತೆ ವ್ಯಾಪಕ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸರ ಕಾರ್ಯ ವೈಖರಿ ತುಂಬಾ ಶ್ಲಾಘನೀಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜನತೆಯಲ್ಲಿ ಜಾಗೃತಿ ಮೂಡಿಸಲು ಇಂದಿನಿಂದ ಜಾತ್ರೆ ಮುಗಿಯುವವರೆಗೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಹಾಗೂ ಕಪ್ಪಡಿಯ ಶ್ರೀ ರಾಚಪ್ಪಾಜಿ ಜಾತ್ರಾ ಪರಿಸರ ಮತ್ತು ಸುತ್ತ ಮುತ್ತಲಿನ ಊರುಗಳಲ್ಲಿ ಸ್ವಾಮೀಜಿಯವರು ಅಹಿಂಸಾ-ಪ್ರಾಣಿದಯಾ-ಆದ್ಯಾತ್ಮ ಸಂದೇಶಯಾತ್ರೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

31 mins ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

1 hour ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

2 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

3 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

4 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

4 hours ago