ಮೈಸೂರು

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು

ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ ಮತ್ತು ಮದ್ಯ – ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘ ಹಾಗೂ ಬಸವ ಧರ್ಮ ಜ್ಞಾನ ಪೀಠದ ಅಧ್ಯಕ್ಷರಾದ ಶ್ರೀ ದಯಾನಂದ ಸ್ವಾಮೀಜಿಯವರು ಅವರು ಪ್ರತಿಪಾದಿಸಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ತಾಲ್ಲೂಕಿನ ಸುಪ್ರಸಿದ್ಧ ಕಪ್ಪಡಿ ಜಾತ್ರಾ ಮಹೋತ್ಸ ಹಿನ್ನೆಲೆಯಲ್ಲಿ ಪ್ರಾಣಿಬಲಿ ನಿಷೇಧ ಕುರಿತು ಪತ್ರಿಕಾಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸುಮಾರು 36,000 ದೇವಾಲಯಗಳು ಒಳಪಡುತ್ತವೆ. ನಾನು ಕರ್ನಾಟಕ ಮಾತ್ರವಲ್ಲದೆ ದೇಶದ ಎಲ್ಲಾ ರಾಜ್ಯಗಳಿಗೂ ಹಾಗೂ ನಮ್ಮ ಪಕ್ಕದ ನೇಪಾಳ ದೇಶಕ್ಕೂ ಭೇಟಿ ನೀಡಿ ಅಲ್ಲಿಯೂ ಪ್ರಾಣಿ ಬಲಿ ನಿಷೇಧಿಸುವಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ಕೆಆರ್ ನಗರ ತಾಲ್ಲೂಕಿನ ಕಪ್ಪಡಿಯ ಶ್ರೀ ರಾಚಪ್ಪಾಜಿ ಜಾತ್ರೆಯು ಶಿವರಾತ್ರಿಯಿಂದ ಆರಂಭಗೊಂಡಿದ್ದು, ಯುಗಾದಿಯವರೆಗೆ ಜರುಗಲಿದೆ. ಸುಮಾರು ಒಂದು ತಿಂಗಳ ಕಾಲ ನಡೆಯುವ ಈ ಜಾತ್ರೆಗೆ ಸಹಸ್ರಾರು ಭಕ್ತರು ಆಗಮಿಸಿ ದೇವರಿಗೆ ಪೂಜಾದಿ ಧಾರ್ಮಿಕ ಸೇವಾ ಕೈಂಕರ್ಯಗಳನ್ನು ಸಲ್ಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಭಕ್ತರು ದೇವರು ಮತ್ತು ಧರ್ಮದ ಹೆಸರಿನಲ್ಲಿ ಹರಕೆಯ ರೂಪದಲ್ಲಿ ಆಡು, ಕುರಿ, ಕೋಳಿ ಮುಂತಾದ ಪ್ರಾಣಿಗಳ ಬಲಿ ನೀಡಲಿದ್ದು, ಇದು ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಭಂದಕ ಅಧಿನಿಯಮ 1959 ಮತ್ತು ನಿಯಮಗಳು 1963 ಹಾಗೂ ತಿದ್ದುಪಡಿ ಕಾಯ್ದೆ 1975ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈ ಪ್ರಾಣಿಬಲಿಯನ್ನು ಮೇಲ್ಕಂಡ ಕಾನೂನು ಹಾಗೂ ಹೈ ಕೋರ್ಟ್ ಆದೇಶಗಳ ಅಡಿಯಲ್ಲಿ ಸಂಪೂರ್ಣವಾಗಿ ತಡೆಗಟ್ಟಬೇಕು ಹಾಗೂ ಪ್ರಾಣಿಗಳನ್ನು ಜಾತ್ರಾ ಪರಿಸರಕ್ಕೆ ಬಾರದಂತೆ ಕಟ್ಟೆಚ್ಚರ ವಹಿಸಬೇಕೆಂದು ಕರ್ನಾಟಕ ಸರ್ಕಾರ, ಮೈಸೂರು ಜಿಲ್ಲಾಡಳಿತ ಮತ್ತು ಕೆಆರ್ ನಗರ ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಶಿವರಾತ್ರಿಯಿಂದ ಇಲ್ಲಿಯವರೆಗೂ ಮೈಸೂರು ಜಿಲ್ಲಾಡಳಿತ, ಕೆಆರ್ ನಗರ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯು ಕಪ್ಪಡಿ ಜಾತ್ರೆಯಲ್ಲಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಿಬಲಿ ನಡೆಯದಂತೆ ವ್ಯಾಪಕ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸರ ಕಾರ್ಯ ವೈಖರಿ ತುಂಬಾ ಶ್ಲಾಘನೀಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜನತೆಯಲ್ಲಿ ಜಾಗೃತಿ ಮೂಡಿಸಲು ಇಂದಿನಿಂದ ಜಾತ್ರೆ ಮುಗಿಯುವವರೆಗೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಹಾಗೂ ಕಪ್ಪಡಿಯ ಶ್ರೀ ರಾಚಪ್ಪಾಜಿ ಜಾತ್ರಾ ಪರಿಸರ ಮತ್ತು ಸುತ್ತ ಮುತ್ತಲಿನ ಊರುಗಳಲ್ಲಿ ಸ್ವಾಮೀಜಿಯವರು ಅಹಿಂಸಾ-ಪ್ರಾಣಿದಯಾ-ಆದ್ಯಾತ್ಮ ಸಂದೇಶಯಾತ್ರೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago