ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಮೈಸೂರಿನ ಹೋಟೆಲ್ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ.
ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿರುವ ಗೋರ್ವಧನ್ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ಹೋಟೆಲ್ ಕೆಲಸಕ್ಕೆ ಬಂದಿದ್ದ ಆರೋಪಿ ವಿಶ್ವ ಮೊದಲಿಗೆ ನಮ್ಮ ತಂದೆ ನೋಡಿಕೊಳ್ಳಲು ನೇಮಿಸಲಾಗಿತ್ತು. ಬಳಿಕ ಇಲ್ಲಿ ಕೆಲಸ ಬಿಟ್ಟಿದ್ದ ಆರೋಪಿ ವಿಶ್ವ ಮತ್ತೆ ಬಂದು ಕೆಲಸಕ್ಕೆ ಸೇರಿಕೊಂಡನು. ಆವಾಗ ನಮ್ಮ ಹೋಟೆಲ್ನಲ್ಲಿ ಸಪ್ಲೇಯರ್ ಹಾಗೂ ರೂಂ ಬಾಯ್ ಗಿ ಕೆಲಸ ಮಾಡುತ್ತಿದ್ದ. ಆತ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. 10 ರಿಂದ 5 ದಿನ ರಜೆ ತೆಗೆದುಕೊಳ್ಳುತ್ತಿದ್ದ. ಹೀಗೆ ಬಿಟ್ಟು ಬಿಟ್ಟು ಕೆಲಸಕ್ಕೆ ಬರುತಿದ್ದ. ಕಳೆದ ಮಂಗಳವಾರ 5 ಸಾವಿರ ಹಣ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ವಾಪಸ್ ಬಂದಿಲ್ಲ. ಪೊಲೀಸರು ನನಗೆ ಕರೆ ಮಾಡಿದಾಗಲೇ ಈತ ಕೊಲೆ ಮಾಡಿದ್ದಾನೆ ಎಂಬುದು ತಿಳಿದಿದ್ದು ಎಂದು ಮಹರಾಜ ಹೋಟೆಲ್ ಮಾಲೀಕ ಗೋವರ್ಧನ್ ಮಾಹಿತಿ ನೀಡಿದರು.
ಆರೋಪಿ ವಿಶ್ವ ಹೆಚ್ಚು ಮಾಬೈಲ್ ನಲ್ಲಿ ಮಾತನಾಡುತಿದ್ದ ಎಂದು ನಮ್ಮ ಹೊಟೇಲ್ ಸಿಬ್ಬಂದಿ ಹೇಳಿದ್ರು, ಹೋಟೆಲ್ ಫೋನ್ನಿಂದಲೂ ಹೆಚ್ಚು ಮಾತನಾಡುತ್ತಿದ್ದ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್ಗೆ ಏಳು ಮಂದಿ ಪೊಲೀಸರು ಬಂದಿದ್ರು, ನಿನ್ನೆ ರಾತ್ರಿಯ ತನಕ ಪೊಲೀಸರು ಇದ್ರು. ಆತ ದಾವಣೆಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದ್ದಾರೆ ಎಂದು ಮಹಾರಾಜ ಹೋಟೆಲ್ ಮಾಲೀಕ ಗೋವರ್ಧನ್ ಹೇಳಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…