ಮೈಸೂರು

ಅಂಜಲಿ ಹತ್ಯೆ ಪ್ರಕರಣ: ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ

ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ಮೈಸೂರಿನ ಹೋಟೆಲ್‌ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ.

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್‌ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವಿನಾಯಕ ನರ್ಸಿಂಗ್‌ ಕೇರ್‌ ಏಜೆನ್ಸಿ ಮೂಲಕ ಹೋಟೆಲ್‌ ಕೆಲಸಕ್ಕೆ ಬಂದಿದ್ದ ಆರೋಪಿ ವಿಶ್ವ ಮೊದಲಿಗೆ ನಮ್ಮ ತಂದೆ ನೋಡಿಕೊಳ್ಳಲು ನೇಮಿಸಲಾಗಿತ್ತು. ಬಳಿಕ ಇಲ್ಲಿ ಕೆಲಸ ಬಿಟ್ಟಿದ್ದ ಆರೋಪಿ ವಿಶ್ವ ಮತ್ತೆ ಬಂದು ಕೆಲಸಕ್ಕೆ ಸೇರಿಕೊಂಡನು. ಆವಾಗ ನಮ್ಮ ಹೋಟೆಲ್‌ನಲ್ಲಿ ಸಪ್ಲೇಯರ್‌‌ ಹಾಗೂ ರೂಂ ಬಾಯ್ ಗಿ ಕೆಲಸ ಮಾಡುತ್ತಿದ್ದ. ಆತ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. 10 ರಿಂದ 5 ದಿನ ರಜೆ ತೆಗೆದುಕೊಳ್ಳುತ್ತಿದ್ದ. ಹೀಗೆ ಬಿಟ್ಟು ಬಿಟ್ಟು ಕೆಲಸಕ್ಕೆ ಬರುತಿದ್ದ. ಕಳೆದ ಮಂಗಳವಾರ 5 ಸಾವಿರ ಹಣ ಅಡ್ವಾನ್ಸ್‌ ತೆಗೆದುಕೊಂಡು ಹೋದವನು ಮತ್ತೆ ವಾಪಸ್‌ ಬಂದಿಲ್ಲ. ಪೊಲೀಸರು ನನಗೆ ಕರೆ ಮಾಡಿದಾಗಲೇ ಈತ ಕೊಲೆ ಮಾಡಿದ್ದಾನೆ ಎಂಬುದು ತಿಳಿದಿದ್ದು ಎಂದು ಮಹರಾಜ ಹೋಟೆಲ್‌ ಮಾಲೀಕ ಗೋವರ್ಧನ್‌ ಮಾಹಿತಿ ನೀಡಿದರು.

ಆರೋಪಿ ವಿಶ್ವ ಹೆಚ್ಚು ಮಾಬೈಲ್‌ ನಲ್ಲಿ ಮಾತನಾಡುತಿದ್ದ ಎಂದು ನಮ್ಮ ಹೊಟೇಲ್‌ ಸಿಬ್ಬಂದಿ ಹೇಳಿದ್ರು, ಹೋಟೆಲ್‌ ಫೋನ್‌ನಿಂದಲೂ ಹೆಚ್ಚು ಮಾತನಾಡುತ್ತಿದ್ದ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್‌ಗೆ ಏಳು ಮಂದಿ ಪೊಲೀಸರು ಬಂದಿದ್ರು, ನಿನ್ನೆ ರಾತ್ರಿಯ ತನಕ ಪೊಲೀಸರು ಇದ್ರು. ಆತ ದಾವಣೆಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದ್ದಾರೆ ಎಂದು ಮಹಾರಾಜ ಹೋಟೆಲ್‌ ಮಾಲೀಕ ಗೋವರ್ಧನ್‌ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

2 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

2 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

2 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

2 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

2 hours ago