ಮೈಸೂರು

ಅಂಜಲಿ ಹತ್ಯೆ ಪ್ರಕರಣ: ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ

ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ಮೈಸೂರಿನ ಹೋಟೆಲ್‌ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ.

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್‌ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವಿನಾಯಕ ನರ್ಸಿಂಗ್‌ ಕೇರ್‌ ಏಜೆನ್ಸಿ ಮೂಲಕ ಹೋಟೆಲ್‌ ಕೆಲಸಕ್ಕೆ ಬಂದಿದ್ದ ಆರೋಪಿ ವಿಶ್ವ ಮೊದಲಿಗೆ ನಮ್ಮ ತಂದೆ ನೋಡಿಕೊಳ್ಳಲು ನೇಮಿಸಲಾಗಿತ್ತು. ಬಳಿಕ ಇಲ್ಲಿ ಕೆಲಸ ಬಿಟ್ಟಿದ್ದ ಆರೋಪಿ ವಿಶ್ವ ಮತ್ತೆ ಬಂದು ಕೆಲಸಕ್ಕೆ ಸೇರಿಕೊಂಡನು. ಆವಾಗ ನಮ್ಮ ಹೋಟೆಲ್‌ನಲ್ಲಿ ಸಪ್ಲೇಯರ್‌‌ ಹಾಗೂ ರೂಂ ಬಾಯ್ ಗಿ ಕೆಲಸ ಮಾಡುತ್ತಿದ್ದ. ಆತ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. 10 ರಿಂದ 5 ದಿನ ರಜೆ ತೆಗೆದುಕೊಳ್ಳುತ್ತಿದ್ದ. ಹೀಗೆ ಬಿಟ್ಟು ಬಿಟ್ಟು ಕೆಲಸಕ್ಕೆ ಬರುತಿದ್ದ. ಕಳೆದ ಮಂಗಳವಾರ 5 ಸಾವಿರ ಹಣ ಅಡ್ವಾನ್ಸ್‌ ತೆಗೆದುಕೊಂಡು ಹೋದವನು ಮತ್ತೆ ವಾಪಸ್‌ ಬಂದಿಲ್ಲ. ಪೊಲೀಸರು ನನಗೆ ಕರೆ ಮಾಡಿದಾಗಲೇ ಈತ ಕೊಲೆ ಮಾಡಿದ್ದಾನೆ ಎಂಬುದು ತಿಳಿದಿದ್ದು ಎಂದು ಮಹರಾಜ ಹೋಟೆಲ್‌ ಮಾಲೀಕ ಗೋವರ್ಧನ್‌ ಮಾಹಿತಿ ನೀಡಿದರು.

ಆರೋಪಿ ವಿಶ್ವ ಹೆಚ್ಚು ಮಾಬೈಲ್‌ ನಲ್ಲಿ ಮಾತನಾಡುತಿದ್ದ ಎಂದು ನಮ್ಮ ಹೊಟೇಲ್‌ ಸಿಬ್ಬಂದಿ ಹೇಳಿದ್ರು, ಹೋಟೆಲ್‌ ಫೋನ್‌ನಿಂದಲೂ ಹೆಚ್ಚು ಮಾತನಾಡುತ್ತಿದ್ದ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್‌ಗೆ ಏಳು ಮಂದಿ ಪೊಲೀಸರು ಬಂದಿದ್ರು, ನಿನ್ನೆ ರಾತ್ರಿಯ ತನಕ ಪೊಲೀಸರು ಇದ್ರು. ಆತ ದಾವಣೆಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದ್ದಾರೆ ಎಂದು ಮಹಾರಾಜ ಹೋಟೆಲ್‌ ಮಾಲೀಕ ಗೋವರ್ಧನ್‌ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

1 hour ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

1 hour ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

1 hour ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

1 hour ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago