ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಮೈಸೂರಿನ ಹೋಟೆಲ್ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ.
ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿರುವ ಗೋರ್ವಧನ್ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ಹೋಟೆಲ್ ಕೆಲಸಕ್ಕೆ ಬಂದಿದ್ದ ಆರೋಪಿ ವಿಶ್ವ ಮೊದಲಿಗೆ ನಮ್ಮ ತಂದೆ ನೋಡಿಕೊಳ್ಳಲು ನೇಮಿಸಲಾಗಿತ್ತು. ಬಳಿಕ ಇಲ್ಲಿ ಕೆಲಸ ಬಿಟ್ಟಿದ್ದ ಆರೋಪಿ ವಿಶ್ವ ಮತ್ತೆ ಬಂದು ಕೆಲಸಕ್ಕೆ ಸೇರಿಕೊಂಡನು. ಆವಾಗ ನಮ್ಮ ಹೋಟೆಲ್ನಲ್ಲಿ ಸಪ್ಲೇಯರ್ ಹಾಗೂ ರೂಂ ಬಾಯ್ ಗಿ ಕೆಲಸ ಮಾಡುತ್ತಿದ್ದ. ಆತ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. 10 ರಿಂದ 5 ದಿನ ರಜೆ ತೆಗೆದುಕೊಳ್ಳುತ್ತಿದ್ದ. ಹೀಗೆ ಬಿಟ್ಟು ಬಿಟ್ಟು ಕೆಲಸಕ್ಕೆ ಬರುತಿದ್ದ. ಕಳೆದ ಮಂಗಳವಾರ 5 ಸಾವಿರ ಹಣ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ವಾಪಸ್ ಬಂದಿಲ್ಲ. ಪೊಲೀಸರು ನನಗೆ ಕರೆ ಮಾಡಿದಾಗಲೇ ಈತ ಕೊಲೆ ಮಾಡಿದ್ದಾನೆ ಎಂಬುದು ತಿಳಿದಿದ್ದು ಎಂದು ಮಹರಾಜ ಹೋಟೆಲ್ ಮಾಲೀಕ ಗೋವರ್ಧನ್ ಮಾಹಿತಿ ನೀಡಿದರು.
ಆರೋಪಿ ವಿಶ್ವ ಹೆಚ್ಚು ಮಾಬೈಲ್ ನಲ್ಲಿ ಮಾತನಾಡುತಿದ್ದ ಎಂದು ನಮ್ಮ ಹೊಟೇಲ್ ಸಿಬ್ಬಂದಿ ಹೇಳಿದ್ರು, ಹೋಟೆಲ್ ಫೋನ್ನಿಂದಲೂ ಹೆಚ್ಚು ಮಾತನಾಡುತ್ತಿದ್ದ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್ಗೆ ಏಳು ಮಂದಿ ಪೊಲೀಸರು ಬಂದಿದ್ರು, ನಿನ್ನೆ ರಾತ್ರಿಯ ತನಕ ಪೊಲೀಸರು ಇದ್ರು. ಆತ ದಾವಣೆಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದ್ದಾರೆ ಎಂದು ಮಹಾರಾಜ ಹೋಟೆಲ್ ಮಾಲೀಕ ಗೋವರ್ಧನ್ ಹೇಳಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…