ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರಕಟ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದೇ ತಿಂಗಳು ಸೆ. 21ರಂದು ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ದೀಪಕ್‌, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್‌ ಅವರು, 2023-24ನೇ ಸಾಲಿನ ಜೀವಮಾನ ಸಾಧನೆ, ಹಿರಿಯ ಪತ್ರಕರ್ತರು, ಛಾಯಾಗ್ರಹಕರು ಸೇರಿದಂತೆ ವರ್ಷದ ಕನ್ನಡ, ಇಂಗ್ಲಿಷ್ ವರದಿಗಳು, ಅತ್ಯುತ್ತಮ ಛಾಯಾಚಿತ್ರ ಹಾಗೂ ವಿದ್ಯುನ್ಮಾನ ವರದಿಗೆ ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿಗಳ ವಿವಿರ:

ದಿನ ತಂತಿ ಪತ್ರಿಕೆಯ ಎಂ.ಎನ್.ಕಿರಣ್ ಕುಮಾರ್ (ಪತ್ರಿಕೋದ್ಯಮ ಕ್ಷೇತ್ರದ ಜೀವಮಾನ ಸಾಧನೆ)

ಪ್ರಜಾವಾಣಿ ಹಿರಿಯ ವರದಿಗಾರ ಸಾಲಿಗ್ರಾಮ ಯಶವಂತ್(ವರ್ಷದ ಹಿರಿಯ ಗ್ರಾಮಾಂತರ ಪತ್ರಕರ್ತ ಪ್ರಶಸ್ತಿ)

ವರ್ತಮಾನ್ ದಿನಪತ್ರಿಕೆ ಸುದ್ಧಿ ಸಂಪಾದಕ ಕೆ.ಎನ್. ನಾಗಸುಂದ್ರಪ್ಪ (ಹಿರಿಯ ಸುದ್ಧಿ ಸಂಪಾದಕ ಪ್ರಶಸ್ತಿ) 

ದಿ. ಹಿಂದು ದಿನಪತ್ರಿಕೆಯ  ಶ್ರೀರಾಮ್ (ಹಿರಿಯ ಛಾಯಾಗ್ರಾಹಕ ಪ್ರಶಸ್ತಿ)

ಈ ಟಿವಿ ಭಾರತ್ ಹಿರಿಯ ವರದಿಗಾರ ಮಹೇಶ್ ಶ್ರವಣಬೆಳಗೋಳ (ದೃಶ್ಯ ಮಾಧ್ಯಮ ಪ್ರಶಸ್ತಿ)

ವಿಸ್ತಾರ ಟಿವಿ ವಿಡಿಯೋಗ್ರಫರ್  ನಾಗೇಶ್.ಎಸ್  (ದೃಶ್ಯ ಮಾಧ್ಯಮ ಹಿರಿಯ ವಿಡಿಯೋಗ್ರಫರ್ ಪ್ರಶಸ್ತಿ) 

ಪ್ರಶಸ್ತಿ ಪುರಸ್ಕೃತರು :
ಇನ್ನು ಈ ಸಾಲಿನ ಉತ್ತಮ ಕನ್ನಡ ವರದಿಗೆ ಹೆಚ್.ಎಸ್ ಸಚೀತ್ (ಪ್ರಜಾವಾಣಿ ಪತ್ರಿಕೆ), ಇಂಗ್ಲೀಷ್ ವರದಿಗೆ ಶಿಲ್ಪಾ.ಪಿ (ಹಿರಿಯ ಪ್ರಧಾನ ವರದಿಗಾರ, ಡೆಕ್ಕನ್ ಹೆರಾಲ್ಡ್), ಉತ್ತಮ ಫೋಟೋಗ್ರ್ರಾಫಿಗೆ ಉದಯ್ ಶಂಕರ್.ಎಸ್ (ಇಂಡಿಯನ್ ಎಕ್ಸ್‌ ಪ್ರೆಸ್ಸ್ ಪತ್ರಿಕೆ), ವಿದ್ಯುನ್ಮಾನ ಮಾಧ್ಯಮದ ವರದಿ ಪ್ರಶಸ್ತಿಗಳಿಗೆ ಜಯಂತ್ ಮತ್ತು ರಾಮು‌ (ದೂರದರ್ಶನ) ಭಾಜನರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago