ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರಕಟ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದೇ ತಿಂಗಳು ಸೆ. 21ರಂದು ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ದೀಪಕ್‌, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್‌ ಅವರು, 2023-24ನೇ ಸಾಲಿನ ಜೀವಮಾನ ಸಾಧನೆ, ಹಿರಿಯ ಪತ್ರಕರ್ತರು, ಛಾಯಾಗ್ರಹಕರು ಸೇರಿದಂತೆ ವರ್ಷದ ಕನ್ನಡ, ಇಂಗ್ಲಿಷ್ ವರದಿಗಳು, ಅತ್ಯುತ್ತಮ ಛಾಯಾಚಿತ್ರ ಹಾಗೂ ವಿದ್ಯುನ್ಮಾನ ವರದಿಗೆ ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿಗಳ ವಿವಿರ:

ದಿನ ತಂತಿ ಪತ್ರಿಕೆಯ ಎಂ.ಎನ್.ಕಿರಣ್ ಕುಮಾರ್ (ಪತ್ರಿಕೋದ್ಯಮ ಕ್ಷೇತ್ರದ ಜೀವಮಾನ ಸಾಧನೆ)

ಪ್ರಜಾವಾಣಿ ಹಿರಿಯ ವರದಿಗಾರ ಸಾಲಿಗ್ರಾಮ ಯಶವಂತ್(ವರ್ಷದ ಹಿರಿಯ ಗ್ರಾಮಾಂತರ ಪತ್ರಕರ್ತ ಪ್ರಶಸ್ತಿ)

ವರ್ತಮಾನ್ ದಿನಪತ್ರಿಕೆ ಸುದ್ಧಿ ಸಂಪಾದಕ ಕೆ.ಎನ್. ನಾಗಸುಂದ್ರಪ್ಪ (ಹಿರಿಯ ಸುದ್ಧಿ ಸಂಪಾದಕ ಪ್ರಶಸ್ತಿ) 

ದಿ. ಹಿಂದು ದಿನಪತ್ರಿಕೆಯ  ಶ್ರೀರಾಮ್ (ಹಿರಿಯ ಛಾಯಾಗ್ರಾಹಕ ಪ್ರಶಸ್ತಿ)

ಈ ಟಿವಿ ಭಾರತ್ ಹಿರಿಯ ವರದಿಗಾರ ಮಹೇಶ್ ಶ್ರವಣಬೆಳಗೋಳ (ದೃಶ್ಯ ಮಾಧ್ಯಮ ಪ್ರಶಸ್ತಿ)

ವಿಸ್ತಾರ ಟಿವಿ ವಿಡಿಯೋಗ್ರಫರ್  ನಾಗೇಶ್.ಎಸ್  (ದೃಶ್ಯ ಮಾಧ್ಯಮ ಹಿರಿಯ ವಿಡಿಯೋಗ್ರಫರ್ ಪ್ರಶಸ್ತಿ) 

ಪ್ರಶಸ್ತಿ ಪುರಸ್ಕೃತರು :
ಇನ್ನು ಈ ಸಾಲಿನ ಉತ್ತಮ ಕನ್ನಡ ವರದಿಗೆ ಹೆಚ್.ಎಸ್ ಸಚೀತ್ (ಪ್ರಜಾವಾಣಿ ಪತ್ರಿಕೆ), ಇಂಗ್ಲೀಷ್ ವರದಿಗೆ ಶಿಲ್ಪಾ.ಪಿ (ಹಿರಿಯ ಪ್ರಧಾನ ವರದಿಗಾರ, ಡೆಕ್ಕನ್ ಹೆರಾಲ್ಡ್), ಉತ್ತಮ ಫೋಟೋಗ್ರ್ರಾಫಿಗೆ ಉದಯ್ ಶಂಕರ್.ಎಸ್ (ಇಂಡಿಯನ್ ಎಕ್ಸ್‌ ಪ್ರೆಸ್ಸ್ ಪತ್ರಿಕೆ), ವಿದ್ಯುನ್ಮಾನ ಮಾಧ್ಯಮದ ವರದಿ ಪ್ರಶಸ್ತಿಗಳಿಗೆ ಜಯಂತ್ ಮತ್ತು ರಾಮು‌ (ದೂರದರ್ಶನ) ಭಾಜನರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

1 hour ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

4 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

4 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

4 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

7 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

10 hours ago