ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರಕಟ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದೇ ತಿಂಗಳು ಸೆ. 21ರಂದು ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ದೀಪಕ್‌, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್‌ ಅವರು, 2023-24ನೇ ಸಾಲಿನ ಜೀವಮಾನ ಸಾಧನೆ, ಹಿರಿಯ ಪತ್ರಕರ್ತರು, ಛಾಯಾಗ್ರಹಕರು ಸೇರಿದಂತೆ ವರ್ಷದ ಕನ್ನಡ, ಇಂಗ್ಲಿಷ್ ವರದಿಗಳು, ಅತ್ಯುತ್ತಮ ಛಾಯಾಚಿತ್ರ ಹಾಗೂ ವಿದ್ಯುನ್ಮಾನ ವರದಿಗೆ ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿಗಳ ವಿವಿರ:

ದಿನ ತಂತಿ ಪತ್ರಿಕೆಯ ಎಂ.ಎನ್.ಕಿರಣ್ ಕುಮಾರ್ (ಪತ್ರಿಕೋದ್ಯಮ ಕ್ಷೇತ್ರದ ಜೀವಮಾನ ಸಾಧನೆ)

ಪ್ರಜಾವಾಣಿ ಹಿರಿಯ ವರದಿಗಾರ ಸಾಲಿಗ್ರಾಮ ಯಶವಂತ್(ವರ್ಷದ ಹಿರಿಯ ಗ್ರಾಮಾಂತರ ಪತ್ರಕರ್ತ ಪ್ರಶಸ್ತಿ)

ವರ್ತಮಾನ್ ದಿನಪತ್ರಿಕೆ ಸುದ್ಧಿ ಸಂಪಾದಕ ಕೆ.ಎನ್. ನಾಗಸುಂದ್ರಪ್ಪ (ಹಿರಿಯ ಸುದ್ಧಿ ಸಂಪಾದಕ ಪ್ರಶಸ್ತಿ) 

ದಿ. ಹಿಂದು ದಿನಪತ್ರಿಕೆಯ  ಶ್ರೀರಾಮ್ (ಹಿರಿಯ ಛಾಯಾಗ್ರಾಹಕ ಪ್ರಶಸ್ತಿ)

ಈ ಟಿವಿ ಭಾರತ್ ಹಿರಿಯ ವರದಿಗಾರ ಮಹೇಶ್ ಶ್ರವಣಬೆಳಗೋಳ (ದೃಶ್ಯ ಮಾಧ್ಯಮ ಪ್ರಶಸ್ತಿ)

ವಿಸ್ತಾರ ಟಿವಿ ವಿಡಿಯೋಗ್ರಫರ್  ನಾಗೇಶ್.ಎಸ್  (ದೃಶ್ಯ ಮಾಧ್ಯಮ ಹಿರಿಯ ವಿಡಿಯೋಗ್ರಫರ್ ಪ್ರಶಸ್ತಿ) 

ಪ್ರಶಸ್ತಿ ಪುರಸ್ಕೃತರು :
ಇನ್ನು ಈ ಸಾಲಿನ ಉತ್ತಮ ಕನ್ನಡ ವರದಿಗೆ ಹೆಚ್.ಎಸ್ ಸಚೀತ್ (ಪ್ರಜಾವಾಣಿ ಪತ್ರಿಕೆ), ಇಂಗ್ಲೀಷ್ ವರದಿಗೆ ಶಿಲ್ಪಾ.ಪಿ (ಹಿರಿಯ ಪ್ರಧಾನ ವರದಿಗಾರ, ಡೆಕ್ಕನ್ ಹೆರಾಲ್ಡ್), ಉತ್ತಮ ಫೋಟೋಗ್ರ್ರಾಫಿಗೆ ಉದಯ್ ಶಂಕರ್.ಎಸ್ (ಇಂಡಿಯನ್ ಎಕ್ಸ್‌ ಪ್ರೆಸ್ಸ್ ಪತ್ರಿಕೆ), ವಿದ್ಯುನ್ಮಾನ ಮಾಧ್ಯಮದ ವರದಿ ಪ್ರಶಸ್ತಿಗಳಿಗೆ ಜಯಂತ್ ಮತ್ತು ರಾಮು‌ (ದೂರದರ್ಶನ) ಭಾಜನರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago