ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು.
ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ ಗುಂಟೆ ಜಾಗವನ್ನು ೨೦೨೩ರ ಸೆಪ್ಟೆಂಬರ್ ೨೯ರಂದು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದರು. ಕೆಆರ್ಎಸ್ ರಸ್ತೆಯಲ್ಲಿರುವ ಸರ್ವೆ ನಂಬರ್ ೪೫೪ರ ಜಾಗದಲ್ಲಿ ಗಣೇಶ್ ದೀಕ್ಷಿತ್ ಎಂಬವರಿಗೆ ೪.೧೧ ಎಕರೆ ಜಾಗವಿತ್ತು. ಅದರಲ್ಲಿ ೨೦ ಗುಂಟೆ ಜಾಗ ವನ್ನು ಖರೀದಿ ಮಾಡಿದ್ದರು. ೨೦ ಗುಂಟೆ ಜಾಗ ವನ್ನು ೧.೮೫ ಕೋಟಿ ರೂ. ಕೊಟ್ಟು ಖರೀದಿಸಿದ್ದರು. ತಮ್ಮ ಜಮೀನಿನಲ್ಲಿ ೮,೯೯೮ ಚದರ ಅಡಿ ಜಾಗವನ್ನು ರಸ್ತೆ ಮತ್ತು ಪೈಪ್ಲೈನ್ಗೆ ಬಿಟ್ಟುಕೊಟ್ಟಿದ್ದರು. ಆದರೆ, ಪಾರ್ವತಿ ಅವರು ತಮ್ಮ ಹೆಸರಿಗೆ ರಸ್ತೆ, ಪೈಲ್ಲೈನ್ ಜಾಗವನ್ನು ಸೇರಿಸಿಕೊಂಡು ಕ್ರಯ ಮಾಡಿಕೊಂಡಿದ್ದರು ಎಂದು ದಾಖಲೆ ಬಹಿರಂಗಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…