ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು.
ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ ಗುಂಟೆ ಜಾಗವನ್ನು ೨೦೨೩ರ ಸೆಪ್ಟೆಂಬರ್ ೨೯ರಂದು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದರು. ಕೆಆರ್ಎಸ್ ರಸ್ತೆಯಲ್ಲಿರುವ ಸರ್ವೆ ನಂಬರ್ ೪೫೪ರ ಜಾಗದಲ್ಲಿ ಗಣೇಶ್ ದೀಕ್ಷಿತ್ ಎಂಬವರಿಗೆ ೪.೧೧ ಎಕರೆ ಜಾಗವಿತ್ತು. ಅದರಲ್ಲಿ ೨೦ ಗುಂಟೆ ಜಾಗ ವನ್ನು ಖರೀದಿ ಮಾಡಿದ್ದರು. ೨೦ ಗುಂಟೆ ಜಾಗ ವನ್ನು ೧.೮೫ ಕೋಟಿ ರೂ. ಕೊಟ್ಟು ಖರೀದಿಸಿದ್ದರು. ತಮ್ಮ ಜಮೀನಿನಲ್ಲಿ ೮,೯೯೮ ಚದರ ಅಡಿ ಜಾಗವನ್ನು ರಸ್ತೆ ಮತ್ತು ಪೈಪ್ಲೈನ್ಗೆ ಬಿಟ್ಟುಕೊಟ್ಟಿದ್ದರು. ಆದರೆ, ಪಾರ್ವತಿ ಅವರು ತಮ್ಮ ಹೆಸರಿಗೆ ರಸ್ತೆ, ಪೈಲ್ಲೈನ್ ಜಾಗವನ್ನು ಸೇರಿಸಿಕೊಂಡು ಕ್ರಯ ಮಾಡಿಕೊಂಡಿದ್ದರು ಎಂದು ದಾಖಲೆ ಬಹಿರಂಗಪಡಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…