ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ.
ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನೀಯೋಗ ದೂರು ನೀಡಿ, ಭಾನುವಾರ ಬೆಳಿಗ್ಗೆ 10ಗಂಟೆಗೆ ಒಳಗೆ ಎಫ್ಐಆರ್ ದಾಖಲಿಸಿ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು. ಇಲ್ಲವಾದರೆ ಪೊಲೀಸ್ ಠಾಣೆ ಎದರು ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದೆ.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನ ಬಳಿ ಬಂದು, ಹಣದ ಬೇಡಿಕೆ ಇಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರು ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ಆರೋಪ ಮುಂದುವರೆಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.
ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯಾದ್ಯಂತ 44ಪ್ರಕರಣ ದಾಖಲಾಗಿದೆ. ಇದರಲ್ಲಿ 22 ಪ್ರಕರಣಗಳ ಎಫ್ಐಆರ್ ನಮ್ಮಲ್ಲಿವೆ. ಆತ ರೌಡಿಶೀಟರ್ ಆಗಿದ್ದರು ಪೊಲೀಸರುವ ಮೂರು ವರ್ಷದಿಂದ ಕ್ರಮತೆಗೆದುಕೊಂಡಿಲ್ಲ. ಇಂತಹ ಬ್ಲಾಕ್ ಮೇಲರ್ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಭಾನುವಾರ ಬೆಳಿಗ್ಗೆ 10 ಗಂಟೆ ಒಳಗೆ ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಠಾಣೆ ಎದರು ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ ವಿಜಯ್ ಕುಮಾರ್, ನಗರದ ಘಟಕದ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…