ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ 25 ಕೆಜಿ ಮೆಫೆಡ್ರೋನ್, 1.6 ಕೆಜಿ ಅಫೀಮು ಮತ್ತು 25 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ.
ಈ ಸಂಬಂಧ ರಾಜಸ್ಥಾನದ ಜಾಲೋರ್ ಜಿಲ್ಲೆಯ ಮಹೇಂದ್ರ ಕುಮಾರ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಎನ್ಸಿಬಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳ ಬಂಧನದ ಬಳಿಕ ಎನ್ಸಿಬಿಯ ಬೆಂಗಳೂರು ವಲಯ ಘಟಕವು ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ಸ್ ಘಟಕ ಮೇಲೆ ದಾಳಿ ನಡೆಸಿ, ಅತ್ಯಾಧುನಿಕ ಉಪಕರಣಗಳು ಮತ್ತು ಡ್ರಗ್ಸ್ ತಯಾರಿಕೆಗೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆದಿದೆ ಎಂದು ಎನ್ಸಿಬಿ ತಿಳಿಸಿದೆ.
ಈ ಪ್ರಕರಣದಲ್ಲಿ ಇದುವರೆಗೆ 10 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳು, 25.6 ಲಕ್ಷ ರೂ.ನಗದು, ಟೊಯೋಟಾ ಫಾರ್ಚೂನರ್ ಎಸ್ಯುವಿ ಮತ್ತು 500 ಕೆಜಿಗಿಂತ ಹೆಚ್ಚು ತೂಕದ ಡ್ರಗ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೈಲಿನಲ್ಲಿದ್ದಾಗ ಡ್ರಗ್ಸ್ ತಯಾರಿಕೆ ಕಲಿತಿದ್ದ ಮಾಸ್ಟರ್ ಮೈಂಡ್
ಜೈಲಿನಲ್ಲಿದ್ದಾಗ ಡ್ರಗ್ಸ್ ತಯಾರಿಕೆಯನ್ನು ಕಲಿತಿದ್ದ ಮಾಸ್ಟರ್ ಮೈಂಡ್ ಮಹೇಂದ್ರ ಕುಮಾರ್, ಜಾಮೀನಿನ ಮೇಲೆ ಹೊರಬಂದ ಬಳಿಕ ಮೈಸೂರಿನಲ್ಲಿ ಈ ರಹಸ್ಯ ಪ್ರಯೋಗಾಲಯ ಸ್ಥಾಪಿಸಿದ್ದ ಎಂದು ಎನ್ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಅಫೀಮ್ ಮತ್ತು ಸ್ಮ್ಯಾಕ್ ಮಾರಾಟ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪಿ ಬಿಷ್ಣೋಯ್, ಎನ್ಡಿಪಿಎಸ್ ಪ್ರಕರಣದಲ್ಲಿ ಜೈಲಿನಲ್ಲಿದ್ದಾಗಲೇ ಸಿಂಥಟಿಕ್ ಡ್ರಗ್ಸ್ ತಯಾರಿಕೆಯ ಪ್ರಕ್ರಿಯೆ, ಮಾರುಕಟ್ಟೆ ಬೇಡಿಕೆ ಮತ್ತು ಸರಬರಾಜು ಜಾಲದ ಬಗ್ಗೆ ತಿಳಿದುಕೊಂಡಿದ್ದ. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, 2024ರಲ್ಲಿ ಮೈಸೂರಿನಲ್ಲಿ ಗುಪ್ತವಾಗಿ ಉತ್ಪಾದನಾ ಘಟಕ ಸ್ಥಾಪಿಸಿ, ಅನೇಕ ಬಾರಿ ಡ್ರಗ್ಸ್ ಉತ್ಪಾದನೆ ಮತ್ತು ವಿತರಣೆ ನಡೆಸಿದ್ದ.
ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿದ್ದ ಘಟಕದಲ್ಲಿ ಡ್ರಗ್ಸ್ ತಯಾರಿಕೆಗೆ ಅಗತ್ಯವಿರುವ ಅತ್ಯಾಧುನಿಕ ಉಪಕರಣಗಳು ಮತ್ತು ಸಂಪೂರ್ಣ ಪ್ರಯೋಗಾಲಯ ವ್ಯವಸ್ಥೆ ಪತ್ತೆಯಾಗಿದೆ. ಈವರೆಗೆ ಬಂಧಿತರಾದ ನಾಲ್ವರೂ ರಾಜಸ್ಥಾನದ ಜಾಲೋರ್ ಜಿಲ್ಲೆಯವರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಸದಸ್ಯರು, ಪ್ರಯೋಗಾಲಯ ಉಪಕರಣಗಳು ಮತ್ತು ರಾಸಾಯನಿಕಗಳ ಸರಬರಾಜು ಮೂಲ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ. ಹೆಬ್ಬಾಳದಲ್ಲಿರುವ ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ತಯಾರಿಕಾ ಘಟಕ ನಡೆಸುತ್ತಿದ್ದ ಗಣಪತ್ ಎಂಬ ವ್ಯಕ್ತಿಯನ್ನು ಎನ್ಸಿಬಿ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಯನ್ನು ತೀವ್ರಗೊಳಿಸಿದೆ ಎಂದು ತಿಳಿದುಬಂದಿದೆ.
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…
ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…
ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…