ಮೈಸೂರು

ಶಿಲ್ಪಿ ಅರುಣ್‌ ಯೋಗಿರಾಜ್‌ ಕಿರೀಟಕ್ಕೆ ಮತ್ತೊಂದು ಗರಿ; ಅಮರನಾಥಗೆ ನಂದಿ ಕೆತ್ತನೆ

ಮೈಸೂರು: ಅಯೋಧ್ಯೆಯ ಶ್ರೀರಾಮ್‌ ಲಲ್ಲಾ, ಕೇದರನಾಥದ ಶಂಕರಾಚಾರ್ಯರ ಪ್ರತಿಮೆ ಕೆತ್ತಿ ಖ್ಯಾತಿ ಪಡೆದಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೈಯಲ್ಲಿ ಮತ್ತೊಂದು ಕಲಾಕೃತಿ ಮೂಡಿಬಂದಿದೆ.

ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕಾಶ್ಮೀರದ ಅಮರನಾಥ ದೇವಾಲಯಕ್ಕೆ ನಂದಿ ವಿಗ್ರಹ ಕೆತ್ತಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅಮರನಾಥ ದೇಗುಲದ ಎದುರಿಗೆ ನಂದಿ ವಿಗ್ರಹ ಪ್ರತಿಷ್ಠಾಪನೆ ಮಾಡಲು ಮೈಸೂರು ಶೈಲಿಯಲ್ಲಿ ಈ ನಂದಿ ವಿಗ್ರಹವನ್ನು ಕೆತ್ತಲಾಗಿದೆ.

ಈ ನಂದಿ ವಿಗ್ರಹ ಮೂರು ಅಡಿ ಎತ್ತರವಿದ್ದು, ಕೃಷ್ಣ ಶಿಲೆಯಲ್ಲಿ ಈ ವಿಗ್ರಹ ಕೆತ್ತಲಾಗಿದೆ. ನಂದಿಗೆ ಅಲಂಕಾರ, ಪ್ರಾಕಾರ, ಪ್ರಕೃತಿ ಬಳಕೆ ಮಾಡಲಾಗಿದೆ. ಈ ನಂದಿ ವಿಗ್ರಹವನ್ನು ಕಾಶ್ಮೀರದ ಅಮರನಾಥ ದೇವಾಲಯದ ಹಿಮದ ಉದ್ಭವ ಲಿಂಗದ ಮುಂದೆ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ಅಮರನಾಥ ಹಿಂದೂಗಳ ಪವಿತ್ರಾ ಯಾತ್ರೆಗಳಲ್ಲಿ ಒಂದು. ಪ್ರತಿ ವರ್ಷ ಉದ್ಭವ ಲಿಂಗದ ದರ್ಶನಕ್ಕೆ ಕೋಟ್ಯಾಂತರ ಜನರು ಈ ದೇವಾಲಯಕ್ಕೆ ತೆರಳುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಮೈಸೂರು ಮೂಲದ ಶಿಲ್ಪಿಯೊಬ್ಬರು ಕೆತ್ತಿರುವ ಮೂರ್ತಿ ಪ್ರತಿಷ್ಠಾಪನೆ ಆಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಯೋಧ್ಯೆಯ ಶ್ರೀರಾಮ ಲಲ್ಲಾ ನಿರ್ಮಾಣಕ್ಕೆ ಬಳಸಲಾಗಿರುವ ಮೈಸೂರು ಮೂಲದ ಕೃಷ್ಣಶಿಲೆಯಲ್ಲೇ ಈ ನಂದಿ ವಿಗ್ರಹವನ್ನು ನಿರ್ಮಾಣ ಮಾಡಲಾಗಿದೆ. ಈ ಶಿಲೆ ಮಂಜಿಗೆ ಕರಗದ ಶಿಲೆಯಾಗಿದೆ. ಆಗಾಗಿ ಈ ಶಿಲೆಯನ್ನೇ ಬಳಸಲಾಗಿದೆ.

ಅರುಣ್‌ ಯೋಗಿರಾಜ್‌ ಅವರಿಗೆ ಕಾಶ್ಮೀರದ ಅಮರನಾಥ್‌ ಬೋರ್ಡ್‌ ವತಿಯಿಂದ ನಂದಿ ವಿಗ್ರಹದ ಕೆತ್ತೆನೆಗೆ ಎರಡು ತಿಂಗಳ ಹಿಂದೆ ಆಹ್ವಾನ ಬಂದಿತ್ತು. ಎರಡು ತಿಂಗಳ ನಿರಂತರ ಪರಿಶ್ರಮದಿಂದ ಈ ನಂದಿ ವಿಗ್ರಹದ ತಯಾರಿ ಕಾರ್ಯ ಪೂರ್ಣಗೊಂಡಿದ್ದು, ಅರುಣ್‌ ಯೋಗಿರಾಜ್‌ ಅವರು ಅಮರನಾಥ ಬೋರ್ಡ್‌ ಅವರಿಗೆ ವಿಗ್ರಹವನ್ನು ಕಳುಹಿಸಿಕೊಟ್ಟಿದ್ದಾರೆ.

ಇನ್ನೂ ಈ ವಿಗ್ರಹವನ್ನು ಜೂನ್‌ ಅಂತ್ಯದಲ್ಲಿ ಪ್ರತಷ್ಠಾಪನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

12 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

13 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

39 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

1 hour ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

1 hour ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

1 hour ago