ಮೈಸೂರು

ಶಿಲ್ಪಿ ಅರುಣ್‌ ಯೋಗಿರಾಜ್‌ ಕಿರೀಟಕ್ಕೆ ಮತ್ತೊಂದು ಗರಿ; ಅಮರನಾಥಗೆ ನಂದಿ ಕೆತ್ತನೆ

ಮೈಸೂರು: ಅಯೋಧ್ಯೆಯ ಶ್ರೀರಾಮ್‌ ಲಲ್ಲಾ, ಕೇದರನಾಥದ ಶಂಕರಾಚಾರ್ಯರ ಪ್ರತಿಮೆ ಕೆತ್ತಿ ಖ್ಯಾತಿ ಪಡೆದಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೈಯಲ್ಲಿ ಮತ್ತೊಂದು ಕಲಾಕೃತಿ ಮೂಡಿಬಂದಿದೆ.

ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕಾಶ್ಮೀರದ ಅಮರನಾಥ ದೇವಾಲಯಕ್ಕೆ ನಂದಿ ವಿಗ್ರಹ ಕೆತ್ತಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅಮರನಾಥ ದೇಗುಲದ ಎದುರಿಗೆ ನಂದಿ ವಿಗ್ರಹ ಪ್ರತಿಷ್ಠಾಪನೆ ಮಾಡಲು ಮೈಸೂರು ಶೈಲಿಯಲ್ಲಿ ಈ ನಂದಿ ವಿಗ್ರಹವನ್ನು ಕೆತ್ತಲಾಗಿದೆ.

ಈ ನಂದಿ ವಿಗ್ರಹ ಮೂರು ಅಡಿ ಎತ್ತರವಿದ್ದು, ಕೃಷ್ಣ ಶಿಲೆಯಲ್ಲಿ ಈ ವಿಗ್ರಹ ಕೆತ್ತಲಾಗಿದೆ. ನಂದಿಗೆ ಅಲಂಕಾರ, ಪ್ರಾಕಾರ, ಪ್ರಕೃತಿ ಬಳಕೆ ಮಾಡಲಾಗಿದೆ. ಈ ನಂದಿ ವಿಗ್ರಹವನ್ನು ಕಾಶ್ಮೀರದ ಅಮರನಾಥ ದೇವಾಲಯದ ಹಿಮದ ಉದ್ಭವ ಲಿಂಗದ ಮುಂದೆ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ಅಮರನಾಥ ಹಿಂದೂಗಳ ಪವಿತ್ರಾ ಯಾತ್ರೆಗಳಲ್ಲಿ ಒಂದು. ಪ್ರತಿ ವರ್ಷ ಉದ್ಭವ ಲಿಂಗದ ದರ್ಶನಕ್ಕೆ ಕೋಟ್ಯಾಂತರ ಜನರು ಈ ದೇವಾಲಯಕ್ಕೆ ತೆರಳುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಮೈಸೂರು ಮೂಲದ ಶಿಲ್ಪಿಯೊಬ್ಬರು ಕೆತ್ತಿರುವ ಮೂರ್ತಿ ಪ್ರತಿಷ್ಠಾಪನೆ ಆಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಯೋಧ್ಯೆಯ ಶ್ರೀರಾಮ ಲಲ್ಲಾ ನಿರ್ಮಾಣಕ್ಕೆ ಬಳಸಲಾಗಿರುವ ಮೈಸೂರು ಮೂಲದ ಕೃಷ್ಣಶಿಲೆಯಲ್ಲೇ ಈ ನಂದಿ ವಿಗ್ರಹವನ್ನು ನಿರ್ಮಾಣ ಮಾಡಲಾಗಿದೆ. ಈ ಶಿಲೆ ಮಂಜಿಗೆ ಕರಗದ ಶಿಲೆಯಾಗಿದೆ. ಆಗಾಗಿ ಈ ಶಿಲೆಯನ್ನೇ ಬಳಸಲಾಗಿದೆ.

ಅರುಣ್‌ ಯೋಗಿರಾಜ್‌ ಅವರಿಗೆ ಕಾಶ್ಮೀರದ ಅಮರನಾಥ್‌ ಬೋರ್ಡ್‌ ವತಿಯಿಂದ ನಂದಿ ವಿಗ್ರಹದ ಕೆತ್ತೆನೆಗೆ ಎರಡು ತಿಂಗಳ ಹಿಂದೆ ಆಹ್ವಾನ ಬಂದಿತ್ತು. ಎರಡು ತಿಂಗಳ ನಿರಂತರ ಪರಿಶ್ರಮದಿಂದ ಈ ನಂದಿ ವಿಗ್ರಹದ ತಯಾರಿ ಕಾರ್ಯ ಪೂರ್ಣಗೊಂಡಿದ್ದು, ಅರುಣ್‌ ಯೋಗಿರಾಜ್‌ ಅವರು ಅಮರನಾಥ ಬೋರ್ಡ್‌ ಅವರಿಗೆ ವಿಗ್ರಹವನ್ನು ಕಳುಹಿಸಿಕೊಟ್ಟಿದ್ದಾರೆ.

ಇನ್ನೂ ಈ ವಿಗ್ರಹವನ್ನು ಜೂನ್‌ ಅಂತ್ಯದಲ್ಲಿ ಪ್ರತಷ್ಠಾಪನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

5 hours ago