ಮೈಸೂರು

ಶಿಲ್ಪಿ ಅರುಣ್‌ ಯೋಗಿರಾಜ್‌ ಕಿರೀಟಕ್ಕೆ ಮತ್ತೊಂದು ಗರಿ; ಅಮರನಾಥಗೆ ನಂದಿ ಕೆತ್ತನೆ

ಮೈಸೂರು: ಅಯೋಧ್ಯೆಯ ಶ್ರೀರಾಮ್‌ ಲಲ್ಲಾ, ಕೇದರನಾಥದ ಶಂಕರಾಚಾರ್ಯರ ಪ್ರತಿಮೆ ಕೆತ್ತಿ ಖ್ಯಾತಿ ಪಡೆದಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೈಯಲ್ಲಿ ಮತ್ತೊಂದು ಕಲಾಕೃತಿ ಮೂಡಿಬಂದಿದೆ.

ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕಾಶ್ಮೀರದ ಅಮರನಾಥ ದೇವಾಲಯಕ್ಕೆ ನಂದಿ ವಿಗ್ರಹ ಕೆತ್ತಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅಮರನಾಥ ದೇಗುಲದ ಎದುರಿಗೆ ನಂದಿ ವಿಗ್ರಹ ಪ್ರತಿಷ್ಠಾಪನೆ ಮಾಡಲು ಮೈಸೂರು ಶೈಲಿಯಲ್ಲಿ ಈ ನಂದಿ ವಿಗ್ರಹವನ್ನು ಕೆತ್ತಲಾಗಿದೆ.

ಈ ನಂದಿ ವಿಗ್ರಹ ಮೂರು ಅಡಿ ಎತ್ತರವಿದ್ದು, ಕೃಷ್ಣ ಶಿಲೆಯಲ್ಲಿ ಈ ವಿಗ್ರಹ ಕೆತ್ತಲಾಗಿದೆ. ನಂದಿಗೆ ಅಲಂಕಾರ, ಪ್ರಾಕಾರ, ಪ್ರಕೃತಿ ಬಳಕೆ ಮಾಡಲಾಗಿದೆ. ಈ ನಂದಿ ವಿಗ್ರಹವನ್ನು ಕಾಶ್ಮೀರದ ಅಮರನಾಥ ದೇವಾಲಯದ ಹಿಮದ ಉದ್ಭವ ಲಿಂಗದ ಮುಂದೆ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ಅಮರನಾಥ ಹಿಂದೂಗಳ ಪವಿತ್ರಾ ಯಾತ್ರೆಗಳಲ್ಲಿ ಒಂದು. ಪ್ರತಿ ವರ್ಷ ಉದ್ಭವ ಲಿಂಗದ ದರ್ಶನಕ್ಕೆ ಕೋಟ್ಯಾಂತರ ಜನರು ಈ ದೇವಾಲಯಕ್ಕೆ ತೆರಳುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಮೈಸೂರು ಮೂಲದ ಶಿಲ್ಪಿಯೊಬ್ಬರು ಕೆತ್ತಿರುವ ಮೂರ್ತಿ ಪ್ರತಿಷ್ಠಾಪನೆ ಆಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಯೋಧ್ಯೆಯ ಶ್ರೀರಾಮ ಲಲ್ಲಾ ನಿರ್ಮಾಣಕ್ಕೆ ಬಳಸಲಾಗಿರುವ ಮೈಸೂರು ಮೂಲದ ಕೃಷ್ಣಶಿಲೆಯಲ್ಲೇ ಈ ನಂದಿ ವಿಗ್ರಹವನ್ನು ನಿರ್ಮಾಣ ಮಾಡಲಾಗಿದೆ. ಈ ಶಿಲೆ ಮಂಜಿಗೆ ಕರಗದ ಶಿಲೆಯಾಗಿದೆ. ಆಗಾಗಿ ಈ ಶಿಲೆಯನ್ನೇ ಬಳಸಲಾಗಿದೆ.

ಅರುಣ್‌ ಯೋಗಿರಾಜ್‌ ಅವರಿಗೆ ಕಾಶ್ಮೀರದ ಅಮರನಾಥ್‌ ಬೋರ್ಡ್‌ ವತಿಯಿಂದ ನಂದಿ ವಿಗ್ರಹದ ಕೆತ್ತೆನೆಗೆ ಎರಡು ತಿಂಗಳ ಹಿಂದೆ ಆಹ್ವಾನ ಬಂದಿತ್ತು. ಎರಡು ತಿಂಗಳ ನಿರಂತರ ಪರಿಶ್ರಮದಿಂದ ಈ ನಂದಿ ವಿಗ್ರಹದ ತಯಾರಿ ಕಾರ್ಯ ಪೂರ್ಣಗೊಂಡಿದ್ದು, ಅರುಣ್‌ ಯೋಗಿರಾಜ್‌ ಅವರು ಅಮರನಾಥ ಬೋರ್ಡ್‌ ಅವರಿಗೆ ವಿಗ್ರಹವನ್ನು ಕಳುಹಿಸಿಕೊಟ್ಟಿದ್ದಾರೆ.

ಇನ್ನೂ ಈ ವಿಗ್ರಹವನ್ನು ಜೂನ್‌ ಅಂತ್ಯದಲ್ಲಿ ಪ್ರತಷ್ಠಾಪನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago