ಮೈಸೂರು

ಶಿಲ್ಪಿ ಅರುಣ್‌ ಯೋಗಿರಾಜ್‌ ಕಿರೀಟಕ್ಕೆ ಮತ್ತೊಂದು ಗರಿ; ಅಮರನಾಥಗೆ ನಂದಿ ಕೆತ್ತನೆ

ಮೈಸೂರು: ಅಯೋಧ್ಯೆಯ ಶ್ರೀರಾಮ್‌ ಲಲ್ಲಾ, ಕೇದರನಾಥದ ಶಂಕರಾಚಾರ್ಯರ ಪ್ರತಿಮೆ ಕೆತ್ತಿ ಖ್ಯಾತಿ ಪಡೆದಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೈಯಲ್ಲಿ ಮತ್ತೊಂದು ಕಲಾಕೃತಿ ಮೂಡಿಬಂದಿದೆ.

ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕಾಶ್ಮೀರದ ಅಮರನಾಥ ದೇವಾಲಯಕ್ಕೆ ನಂದಿ ವಿಗ್ರಹ ಕೆತ್ತಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅಮರನಾಥ ದೇಗುಲದ ಎದುರಿಗೆ ನಂದಿ ವಿಗ್ರಹ ಪ್ರತಿಷ್ಠಾಪನೆ ಮಾಡಲು ಮೈಸೂರು ಶೈಲಿಯಲ್ಲಿ ಈ ನಂದಿ ವಿಗ್ರಹವನ್ನು ಕೆತ್ತಲಾಗಿದೆ.

ಈ ನಂದಿ ವಿಗ್ರಹ ಮೂರು ಅಡಿ ಎತ್ತರವಿದ್ದು, ಕೃಷ್ಣ ಶಿಲೆಯಲ್ಲಿ ಈ ವಿಗ್ರಹ ಕೆತ್ತಲಾಗಿದೆ. ನಂದಿಗೆ ಅಲಂಕಾರ, ಪ್ರಾಕಾರ, ಪ್ರಕೃತಿ ಬಳಕೆ ಮಾಡಲಾಗಿದೆ. ಈ ನಂದಿ ವಿಗ್ರಹವನ್ನು ಕಾಶ್ಮೀರದ ಅಮರನಾಥ ದೇವಾಲಯದ ಹಿಮದ ಉದ್ಭವ ಲಿಂಗದ ಮುಂದೆ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ಅಮರನಾಥ ಹಿಂದೂಗಳ ಪವಿತ್ರಾ ಯಾತ್ರೆಗಳಲ್ಲಿ ಒಂದು. ಪ್ರತಿ ವರ್ಷ ಉದ್ಭವ ಲಿಂಗದ ದರ್ಶನಕ್ಕೆ ಕೋಟ್ಯಾಂತರ ಜನರು ಈ ದೇವಾಲಯಕ್ಕೆ ತೆರಳುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಮೈಸೂರು ಮೂಲದ ಶಿಲ್ಪಿಯೊಬ್ಬರು ಕೆತ್ತಿರುವ ಮೂರ್ತಿ ಪ್ರತಿಷ್ಠಾಪನೆ ಆಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಯೋಧ್ಯೆಯ ಶ್ರೀರಾಮ ಲಲ್ಲಾ ನಿರ್ಮಾಣಕ್ಕೆ ಬಳಸಲಾಗಿರುವ ಮೈಸೂರು ಮೂಲದ ಕೃಷ್ಣಶಿಲೆಯಲ್ಲೇ ಈ ನಂದಿ ವಿಗ್ರಹವನ್ನು ನಿರ್ಮಾಣ ಮಾಡಲಾಗಿದೆ. ಈ ಶಿಲೆ ಮಂಜಿಗೆ ಕರಗದ ಶಿಲೆಯಾಗಿದೆ. ಆಗಾಗಿ ಈ ಶಿಲೆಯನ್ನೇ ಬಳಸಲಾಗಿದೆ.

ಅರುಣ್‌ ಯೋಗಿರಾಜ್‌ ಅವರಿಗೆ ಕಾಶ್ಮೀರದ ಅಮರನಾಥ್‌ ಬೋರ್ಡ್‌ ವತಿಯಿಂದ ನಂದಿ ವಿಗ್ರಹದ ಕೆತ್ತೆನೆಗೆ ಎರಡು ತಿಂಗಳ ಹಿಂದೆ ಆಹ್ವಾನ ಬಂದಿತ್ತು. ಎರಡು ತಿಂಗಳ ನಿರಂತರ ಪರಿಶ್ರಮದಿಂದ ಈ ನಂದಿ ವಿಗ್ರಹದ ತಯಾರಿ ಕಾರ್ಯ ಪೂರ್ಣಗೊಂಡಿದ್ದು, ಅರುಣ್‌ ಯೋಗಿರಾಜ್‌ ಅವರು ಅಮರನಾಥ ಬೋರ್ಡ್‌ ಅವರಿಗೆ ವಿಗ್ರಹವನ್ನು ಕಳುಹಿಸಿಕೊಟ್ಟಿದ್ದಾರೆ.

ಇನ್ನೂ ಈ ವಿಗ್ರಹವನ್ನು ಜೂನ್‌ ಅಂತ್ಯದಲ್ಲಿ ಪ್ರತಷ್ಠಾಪನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

7 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

8 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

8 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

9 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago