ಮೈಸೂರು

ಮೈಸೂರು | ಅವಧೂತ ಪೀಠಕ್ಕೆ ಮತ್ತೊಂದು ಗರಿ

ಮೈಸೂರು: ಈಗಾಗಲೇ ಹಲವು ವಿಶೇಷತೆಗಳಿಂದ ದಾಖಲೆಗಳನ್ನು ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಮೈಸೂರಿನ ಅವಧೂತ ದತ್ತ ಪೀಠವು ಇದೀಗ ಮತ್ತೊಂದು ದಾಖಲೆ ಬರೆದಿದೆ.

ಈ ಬಾರಿ ಬೋನ್ಸಾಯಿ ವೃಕ್ಷಗಳ ಸಂಗ್ರಹಣೆಯಲ್ಲಿ ದಾಖಲೆ ಮಾಡಿದ್ದು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಆಸಕ್ತಿ, ಕಾಳಜಿ ಮತ್ತು ಪರಿಸರ ಪ್ರೇಮ ಕಾರಣವಾಗಿದೆ.

ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿನ ವಿಶ್ವವಿಖ್ಯಾತ ಕಿಷ್ಕಿಂಧಾ ಮೂಲಿಕಾ ಬೋನ್ಸಾಯಿ ವನವು 2006 ರಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಂದ ಸ್ಥಾಪಿಸಲ್ಪಟ್ಟಿದ್ದು ದೇಶಾದ್ಯಂತ ಎಲ್ಲ ಜನರು,ಪ್ರವಾಸಿಗರು ಹಾಗೂ ಭಕ್ತರ ಮನ ಸೂರೆಗೊಳ್ಳುತ್ತಿದೆ.

ಆಶ್ರಮದ ಬೋನ್ಸಾಯಿ ವನದಲ್ಲಿ ಹೊಸದಾಗಿ ಸಾವಿರಾರು ಅತ್ಯಪರೂಪದ ಬೋನ್ಸಾಯಿ ವೃಕ್ಷಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ಭಾರತ ದೇಶವಷ್ಟೇ ಅಲ್ಲದೆ ಥೈವಾನ್, ಇಂಗ್ಲೆಂಡ್, ಜಪಾನ್ ಮತ್ತಿತರ ದೇಶಗಳಿಂದ ತರಿಸಲಾಗಿದೆ.ವಿಶ್ವದಲ್ಲೇ ಅತಿ ಹೆಚ್ಚು ಬೋನ್ಸಾಯಿ ವೃಕ್ಷಗಳಿರುವ ವನವೆಂಬ ಹೆಗ್ಗಳಿಕೆ ಪಡೆದಿರುವ ಅವಧೂತ ದತ್ತಪೀಠ ಈಗ ಮತ್ತೊಂದು ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.ಈಗ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಒಟ್ಟು 10,836 ಬೋನ್ಸಾಯ್ ವೃಕ್ಷಗಳಿವೆ. ಪುಣೆಯಲ್ಲಿ 3333 ಬೋನ್ಸಾಯ್ ವೃಕ್ಷಗಳಿದ್ದು, ಅಲ್ಲಿನ ದಾಖಲೆಯನ್ನು ಅವಧೂತ ದತ್ತಪೀಠ ಮುರಿದಿದೆ.

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

10 mins ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

31 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

1 hour ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

1 hour ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

2 hours ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

2 hours ago