ಮೈಸೂರು: ಈಗಾಗಲೇ ಹಲವು ವಿಶೇಷತೆಗಳಿಂದ ದಾಖಲೆಗಳನ್ನು ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಮೈಸೂರಿನ ಅವಧೂತ ದತ್ತ ಪೀಠವು ಇದೀಗ ಮತ್ತೊಂದು ದಾಖಲೆ ಬರೆದಿದೆ.
ಈ ಬಾರಿ ಬೋನ್ಸಾಯಿ ವೃಕ್ಷಗಳ ಸಂಗ್ರಹಣೆಯಲ್ಲಿ ದಾಖಲೆ ಮಾಡಿದ್ದು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಆಸಕ್ತಿ, ಕಾಳಜಿ ಮತ್ತು ಪರಿಸರ ಪ್ರೇಮ ಕಾರಣವಾಗಿದೆ.
ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿನ ವಿಶ್ವವಿಖ್ಯಾತ ಕಿಷ್ಕಿಂಧಾ ಮೂಲಿಕಾ ಬೋನ್ಸಾಯಿ ವನವು 2006 ರಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಂದ ಸ್ಥಾಪಿಸಲ್ಪಟ್ಟಿದ್ದು ದೇಶಾದ್ಯಂತ ಎಲ್ಲ ಜನರು,ಪ್ರವಾಸಿಗರು ಹಾಗೂ ಭಕ್ತರ ಮನ ಸೂರೆಗೊಳ್ಳುತ್ತಿದೆ.
ಆಶ್ರಮದ ಬೋನ್ಸಾಯಿ ವನದಲ್ಲಿ ಹೊಸದಾಗಿ ಸಾವಿರಾರು ಅತ್ಯಪರೂಪದ ಬೋನ್ಸಾಯಿ ವೃಕ್ಷಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ಭಾರತ ದೇಶವಷ್ಟೇ ಅಲ್ಲದೆ ಥೈವಾನ್, ಇಂಗ್ಲೆಂಡ್, ಜಪಾನ್ ಮತ್ತಿತರ ದೇಶಗಳಿಂದ ತರಿಸಲಾಗಿದೆ.ವಿಶ್ವದಲ್ಲೇ ಅತಿ ಹೆಚ್ಚು ಬೋನ್ಸಾಯಿ ವೃಕ್ಷಗಳಿರುವ ವನವೆಂಬ ಹೆಗ್ಗಳಿಕೆ ಪಡೆದಿರುವ ಅವಧೂತ ದತ್ತಪೀಠ ಈಗ ಮತ್ತೊಂದು ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.ಈಗ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಒಟ್ಟು 10,836 ಬೋನ್ಸಾಯ್ ವೃಕ್ಷಗಳಿವೆ. ಪುಣೆಯಲ್ಲಿ 3333 ಬೋನ್ಸಾಯ್ ವೃಕ್ಷಗಳಿದ್ದು, ಅಲ್ಲಿನ ದಾಖಲೆಯನ್ನು ಅವಧೂತ ದತ್ತಪೀಠ ಮುರಿದಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…