ಮೈಸೂರು

ಮೈಸೂರು | ಅವಧೂತ ಪೀಠಕ್ಕೆ ಮತ್ತೊಂದು ಗರಿ

ಮೈಸೂರು: ಈಗಾಗಲೇ ಹಲವು ವಿಶೇಷತೆಗಳಿಂದ ದಾಖಲೆಗಳನ್ನು ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಮೈಸೂರಿನ ಅವಧೂತ ದತ್ತ ಪೀಠವು ಇದೀಗ ಮತ್ತೊಂದು ದಾಖಲೆ ಬರೆದಿದೆ.

ಈ ಬಾರಿ ಬೋನ್ಸಾಯಿ ವೃಕ್ಷಗಳ ಸಂಗ್ರಹಣೆಯಲ್ಲಿ ದಾಖಲೆ ಮಾಡಿದ್ದು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಆಸಕ್ತಿ, ಕಾಳಜಿ ಮತ್ತು ಪರಿಸರ ಪ್ರೇಮ ಕಾರಣವಾಗಿದೆ.

ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿನ ವಿಶ್ವವಿಖ್ಯಾತ ಕಿಷ್ಕಿಂಧಾ ಮೂಲಿಕಾ ಬೋನ್ಸಾಯಿ ವನವು 2006 ರಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಂದ ಸ್ಥಾಪಿಸಲ್ಪಟ್ಟಿದ್ದು ದೇಶಾದ್ಯಂತ ಎಲ್ಲ ಜನರು,ಪ್ರವಾಸಿಗರು ಹಾಗೂ ಭಕ್ತರ ಮನ ಸೂರೆಗೊಳ್ಳುತ್ತಿದೆ.

ಆಶ್ರಮದ ಬೋನ್ಸಾಯಿ ವನದಲ್ಲಿ ಹೊಸದಾಗಿ ಸಾವಿರಾರು ಅತ್ಯಪರೂಪದ ಬೋನ್ಸಾಯಿ ವೃಕ್ಷಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ಭಾರತ ದೇಶವಷ್ಟೇ ಅಲ್ಲದೆ ಥೈವಾನ್, ಇಂಗ್ಲೆಂಡ್, ಜಪಾನ್ ಮತ್ತಿತರ ದೇಶಗಳಿಂದ ತರಿಸಲಾಗಿದೆ.ವಿಶ್ವದಲ್ಲೇ ಅತಿ ಹೆಚ್ಚು ಬೋನ್ಸಾಯಿ ವೃಕ್ಷಗಳಿರುವ ವನವೆಂಬ ಹೆಗ್ಗಳಿಕೆ ಪಡೆದಿರುವ ಅವಧೂತ ದತ್ತಪೀಠ ಈಗ ಮತ್ತೊಂದು ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.ಈಗ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಒಟ್ಟು 10,836 ಬೋನ್ಸಾಯ್ ವೃಕ್ಷಗಳಿವೆ. ಪುಣೆಯಲ್ಲಿ 3333 ಬೋನ್ಸಾಯ್ ವೃಕ್ಷಗಳಿದ್ದು, ಅಲ್ಲಿನ ದಾಖಲೆಯನ್ನು ಅವಧೂತ ದತ್ತಪೀಠ ಮುರಿದಿದೆ.

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago