Mysore
17
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ

insult to Ambedkars nameplate

ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಹಲ್ಲರೆ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಇನ್ನು ಕೆಳದ ಕೆಲ ದಿನಗಳ ಹಿಂದಷ್ಟೆ ಸಿಎಂ ಸ್ವಕ್ಷೇತ್ರ ವಾಜಮಂಗಲ‌ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ.

ಕಳೆದ ವರ್ಷ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಈ ಗ್ರಾಮದಲ್ಲಿ ಭಾರೀ ಗಲಾಟೆ ಉಂಟಾಗಿತ್ತು. ಪ್ರಕರಣ ಸಂಬಂಧ ಸುಮಾರು 30ಕ್ಕೂ ಹೆಚ್ಚು ಜನರ ವಿರುದ್ದ ಪ್ರಕರಣ ಕೂಡ ದಾಖಲಾಗಿತ್ತು. ಬಳಿಕ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್ ಹಾಗೂ ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ಸಂಧಾನ ಸಭೆ ನಡೆಸಿ ಅಂಬೇಡ್ಕರ್ ನಾಮಫಲಕ ಅಳವಡಿಸಲಾಗಿತ್ತು.

ಹೀಗಿರುವಾಗಲೇ ನಿನ್ನೆ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಸಿಸಿ‌ ಕ್ಯಾಮರಾ ಕಾರ್ಯನಿರ್ವಹಿಸದ ಸಮಯ ನೋಡಿ ಕಿಡಿಗೇಡಿಗಳು ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದಾರೆ.

Tags:
error: Content is protected !!