ಮೈಸೂರು

ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ

ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಹಲ್ಲರೆ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಇನ್ನು ಕೆಳದ ಕೆಲ ದಿನಗಳ ಹಿಂದಷ್ಟೆ ಸಿಎಂ ಸ್ವಕ್ಷೇತ್ರ ವಾಜಮಂಗಲ‌ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ.

ಕಳೆದ ವರ್ಷ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಈ ಗ್ರಾಮದಲ್ಲಿ ಭಾರೀ ಗಲಾಟೆ ಉಂಟಾಗಿತ್ತು. ಪ್ರಕರಣ ಸಂಬಂಧ ಸುಮಾರು 30ಕ್ಕೂ ಹೆಚ್ಚು ಜನರ ವಿರುದ್ದ ಪ್ರಕರಣ ಕೂಡ ದಾಖಲಾಗಿತ್ತು. ಬಳಿಕ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್ ಹಾಗೂ ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ಸಂಧಾನ ಸಭೆ ನಡೆಸಿ ಅಂಬೇಡ್ಕರ್ ನಾಮಫಲಕ ಅಳವಡಿಸಲಾಗಿತ್ತು.

ಹೀಗಿರುವಾಗಲೇ ನಿನ್ನೆ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಸಿಸಿ‌ ಕ್ಯಾಮರಾ ಕಾರ್ಯನಿರ್ವಹಿಸದ ಸಮಯ ನೋಡಿ ಕಿಡಿಗೇಡಿಗಳು ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

24 seconds ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

1 hour ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

6 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

6 hours ago