insult to Ambedkars nameplate
ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಹಲ್ಲರೆ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.
ಇನ್ನು ಕೆಳದ ಕೆಲ ದಿನಗಳ ಹಿಂದಷ್ಟೆ ಸಿಎಂ ಸ್ವಕ್ಷೇತ್ರ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ಗೆ ಅಪಮಾನ ಎಸಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ.
ಕಳೆದ ವರ್ಷ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಈ ಗ್ರಾಮದಲ್ಲಿ ಭಾರೀ ಗಲಾಟೆ ಉಂಟಾಗಿತ್ತು. ಪ್ರಕರಣ ಸಂಬಂಧ ಸುಮಾರು 30ಕ್ಕೂ ಹೆಚ್ಚು ಜನರ ವಿರುದ್ದ ಪ್ರಕರಣ ಕೂಡ ದಾಖಲಾಗಿತ್ತು. ಬಳಿಕ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್ ಹಾಗೂ ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ಸಂಧಾನ ಸಭೆ ನಡೆಸಿ ಅಂಬೇಡ್ಕರ್ ನಾಮಫಲಕ ಅಳವಡಿಸಲಾಗಿತ್ತು.
ಹೀಗಿರುವಾಗಲೇ ನಿನ್ನೆ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಸಿಸಿ ಕ್ಯಾಮರಾ ಕಾರ್ಯನಿರ್ವಹಿಸದ ಸಮಯ ನೋಡಿ ಕಿಡಿಗೇಡಿಗಳು ಅಂಬೇಡ್ಕರ್ಗೆ ಅಪಮಾನ ಎಸಗಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…