ಮೈಸೂರು

ಡಿಜಿಪಿ ರಾಮಚಂದ್ರ ರಾವ್‌ಗೆ ಇನ್ನೊಂದು ಸಂಕಷ್ಟ: 11 ವರ್ಷಗಳ ಹಿಂದಿನ ಕೇಸ್‌ ಅನ್ನು ತನಿಖೆ ನಡೆಸುವಂತೆ ಸಿಬಿಐಗೆ ಪತ್ರ ಬರೆದ ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರಿಗೆ, ಪುತ್ರಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿಕೊಂಡ ಬೆನ್ನಲ್ಲೇ ಇನ್ನೊಂದು ಸಂಕಷ್ಟ ಎದುರಾಗಿದೆ. 11 ವರ್ಷಗಳ ಹಿಂದೆ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್‌ ದರೋಡೆ ಪ್ರಕರಣವನ್ನು ರಿ-ಓಪನ್‌ ಮಾಡಿ ತನಿಖೆ ನಡೆಸುವಂತೆ ಸಿಬಿಐಗೆ ದೂರುದಾರ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಹೌದು, ರಾಮಚಂದ್ರ ಅವರಿಗೆ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಮಲಮಗಳು ರನ್ಯಾ ಅವರಿಂದ ಯಾವಾಗ ಬೇಕಾದರೂ ಡಿಆರ್‌ಐ, ಸಿಬಿಐ ಹಾಗೂ ಇ.ಡಿ. ತನಿಖಾ ಸಂಸ್ಥೆಗಳಿಂದ ತನಿಖಾ ವಿಚಾರಣೆ ಎದುರಾಗುವ ಸಾಧ್ಯತೆ ಇದೆ. ಈ ಮಧ್ಯೆಯೇ ಅವರಿಗೆ 2014ರ ಪ್ರಕರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ, ಇಲವಾಲ ದರೋಡೆ ಪ್ರಕರಣವನ್ನು ಮತ್ತೆ ರಿ-ಓಪನ್‌ ಮಾಡಿ ತನಿಖೆ ನಡೆಸಬೇಕು ಎಂದು ಸಿಬಿಐಗೆ 9 ಪುಟಗಳ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ?

11 ವರ್ಷಗಳ ಹಿಂದೆ 2.27 ಕೋಟಿ ರೂ. ಹಾಗೂ 2 ಕೆ.ಜಿ. ಚಿನ್ನ ದರೋಡೆ ಮಾಡಿದ ಕುರಿತು ಪೊಲೀಸರ ವಿರುದ್ಧವೇ ದೂರು ದಾಖಲಾಗಿತ್ತು. ಈ ಬಗ್ಗೆ ಸಿಐಡಿ ತನಿಖೆಯೂ ನಡೆದಿತ್ತು. ಆ ವೇಳೆ ಐಜಿಪಿ ರಾಮಚಂದ್ರ ರಾವ್ ಗನ್‌ಮ್ಯಾನ್ ಹಾಗೂ ಸೌತ್ ಪೊಲೀಸ್ ಠಾಣೆ ಸಿಬ್ಬಂದಿ ಸೇರಿ ಡಿವೈಎಸ್‌ಪಿ ಸ್ಕ್ವಾಡ್ ಮೇಲೆ ದರೋಡೆ ಆರೋಪ ಬಂದಿತ್ತು. ಆದರೆ ಈ ಕೇಸ್‌ನಲ್ಲಿ ವಿಚಾರಣೆ ನಡೆದು ಎಲ್ಲರೂ ಆರೋಪ ಮುಕ್ತರಾಗಿದ್ದರು.

ಸಿಐಡಿ ಅಧಿಕಾರಿಗಳು ಇಲ್ಲಿಯವರೆಗೂ ಗೋಲ್ಡ್ ಸ್ಮಗ್ಲಿಂಗ್ ಮತ್ತು ಹವಾಲ ಹಣದ ಮೂಲದ ಬಗ್ಗೆ ಯಾವುದೇ ತನಿಖೆ ನಡೆಸಿರಲಿಲ್ಲ. ಆದರೆ ಇದೀಗ ಈ ಪ್ರಕರಣವನ್ನು ಮರುಜೀವ ನೀಡಿ ತನಿಖೆ ನಡೆಸಬೇಕೆಂದು ದೂರು ನೀಡಿದ್ದಾರೆ. ಈ ದೂರಿನೊಂದಿಗೆ ವೀಡಿಯೋ ಸಾಕ್ಷಿಗಳು ಹಾಗೂ ಇತರ ದಾಖಲೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ 2014 ರಿಂದಲೇ ಗೋಲ್ಡ್‌ ಸ್ಮಗ್ಲಿಂಗ್‌ ನಡೆದುಕೊಂಡು ಬರುತ್ತಿದೆ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಪ್ರಕರಣದಲ್ಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಹಚ್ಚಿದ್ದರೆ ಇಂತಹ ಪ್ರಕರಣ ಮರುಕಳಿಸುವುದನ್ನು ತಡೆಯಬಹುದಿತ್ತು. ಹೀಗಾಗಿ ಈ ಕೇಸ್‌ ಅನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

5 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

6 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

6 hours ago