ಮೈಸೂರು

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ್ದಕ್ಕಾಗಿ ಕ್ಷಮೆ ಕೇಳಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸ್ಪಷ್ಟ ಪಡಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಆರೋಪ ಮಾಡಿರುವ ಎಲ್ಲಾ ವಿಚಾರವನ್ನು ಒಪ್ಪಿಕೊಂಡು, ಅದಕ್ಕೆ ಪೂರಕವಾಗಿ ಎಲ್ಲಾ ಮಾಹಿತಿ, ಸಾಕ್ಷ್ಯಾಧಾರಗಳನ್ನು ನೀಡಿದ್ದ ವಿನೋದ್ ಈ ಒಂದು ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾನೆ. ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಪ್ರಭಾವಿಗೆ ಲಂಚ ಕೊಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದ್ದಾನೆ, ಅದಕ್ಕೆ ಪೂರಕವಾಗಿ ಕೆಲವು ಸಾಕ್ಷ್ಯಾಧಾರಗಳನ್ನು ನೀಡಿದ್ದಾನೆ, ಅದನ್ನು ಆಧರಿಸಿ, ತನಿಖೆ ನಡೆಸಿದಾಗ, ಪ್ರಭಾವಿ ಯಾರು? ಎಂಬ ಸತ್ಯ ತಿಳಿಯುತ್ತದೆ ಎಂದಿದ್ದಾರೆ.

14 ನಿವೇಶನಗಳನ್ನು ಕಾನೂನು ಬದ್ದವಾಗಿ ಪಡೆದಿದ್ದೇವೆ ಎಂದು ವಿಧಾನಸೌಧದಲ್ಲೇ ಆರ್ಭಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಾನು ಪ್ರಕರಣ ದಾಖಲು ಮಾಡುತ್ತಿದ್ದಂತೆ ತಮ್ಮ ತಪ್ಪನ್ನು ಒಪ್ಪಿಕೊಂಡು, 14 ನಿವೇಶನಗಳನ್ನು ವಾಪಾಸ್ಸು ಕೊಟ್ಟಿದ್ದಕ್ಕಿಂತ ದೊಡ್ಡ ತಪ್ಪನ್ನು ನಾನು ಮಾಡಿರುವುದಿಲ್ಲ, ನಡೆಯುವಾಗ ಕೆಲವು ಸಲ ಎಡವುದು ಸಹಜ ಎಂದಿದ್ದಾರೆ.

ಸೈಬರ್ ಠಾಣಾ ಅಧಿಕಾರಿಗಳು ನನ್ನನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಬೆಂಬಲಕ್ಕೆ ನಿಂತ ಮಾಧ್ಯಮದವರಿಗೆ, ರಾಜ್ಯದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು, ಸಮಾಜದ ಹಿತಕ್ಕಾಗಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

15 mins ago

ಪರಿಹಾರ ಧನ ಪರಿಹಾರವಲ್ಲ..!

ಗಿರೀಶ್ ಹುಣಸೂರು ನೊಂದ ಕುಂಟುಂಬಗಳಿಗೆ ಲಕ್ಷ ಲಕ್ಷ ರೂ. ಪರಿಹಾರ ತಲುಪಿಸಿರುವ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ…

19 mins ago

ಯುಜಿಡಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಕೆ.ಬಿ.ರಮೇಶ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ ಡಿಸಿ ಮೈಸೂರು: ಬೆಂಗಳೂರು ಬಳಿಕ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ…

27 mins ago

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

9 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

9 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

10 hours ago