ಮೈಸೂರು

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ್ದಕ್ಕಾಗಿ ಕ್ಷಮೆ ಕೇಳಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸ್ಪಷ್ಟ ಪಡಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಆರೋಪ ಮಾಡಿರುವ ಎಲ್ಲಾ ವಿಚಾರವನ್ನು ಒಪ್ಪಿಕೊಂಡು, ಅದಕ್ಕೆ ಪೂರಕವಾಗಿ ಎಲ್ಲಾ ಮಾಹಿತಿ, ಸಾಕ್ಷ್ಯಾಧಾರಗಳನ್ನು ನೀಡಿದ್ದ ವಿನೋದ್ ಈ ಒಂದು ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾನೆ. ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಪ್ರಭಾವಿಗೆ ಲಂಚ ಕೊಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದ್ದಾನೆ, ಅದಕ್ಕೆ ಪೂರಕವಾಗಿ ಕೆಲವು ಸಾಕ್ಷ್ಯಾಧಾರಗಳನ್ನು ನೀಡಿದ್ದಾನೆ, ಅದನ್ನು ಆಧರಿಸಿ, ತನಿಖೆ ನಡೆಸಿದಾಗ, ಪ್ರಭಾವಿ ಯಾರು? ಎಂಬ ಸತ್ಯ ತಿಳಿಯುತ್ತದೆ ಎಂದಿದ್ದಾರೆ.

14 ನಿವೇಶನಗಳನ್ನು ಕಾನೂನು ಬದ್ದವಾಗಿ ಪಡೆದಿದ್ದೇವೆ ಎಂದು ವಿಧಾನಸೌಧದಲ್ಲೇ ಆರ್ಭಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಾನು ಪ್ರಕರಣ ದಾಖಲು ಮಾಡುತ್ತಿದ್ದಂತೆ ತಮ್ಮ ತಪ್ಪನ್ನು ಒಪ್ಪಿಕೊಂಡು, 14 ನಿವೇಶನಗಳನ್ನು ವಾಪಾಸ್ಸು ಕೊಟ್ಟಿದ್ದಕ್ಕಿಂತ ದೊಡ್ಡ ತಪ್ಪನ್ನು ನಾನು ಮಾಡಿರುವುದಿಲ್ಲ, ನಡೆಯುವಾಗ ಕೆಲವು ಸಲ ಎಡವುದು ಸಹಜ ಎಂದಿದ್ದಾರೆ.

ಸೈಬರ್ ಠಾಣಾ ಅಧಿಕಾರಿಗಳು ನನ್ನನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಬೆಂಬಲಕ್ಕೆ ನಿಂತ ಮಾಧ್ಯಮದವರಿಗೆ, ರಾಜ್ಯದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು, ಸಮಾಜದ ಹಿತಕ್ಕಾಗಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

6 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

6 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

6 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

6 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago