ಮೈಸೂರು: 2024-25ನೇ ಸಾಲಿಗೆ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಬಡ ಜನರು ಮತ್ತು ವಿಶೇಷಚೇತನ ಬಡಜನರಿಗೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಸತಿ ಯೋಜನೆಯಡಿ ಆಯ್ಕೆ ಆಗಿ ಗೃಹ ನಿರ್ಮಾಣ ಕಾರ್ಯ ಕೈಗೊಂಡಿರುವವರಿಗೆ ಅಥವಾ ಸ್ವಂತವಾಗಿ ಗೃಹ ನಿರ್ಮಾಣ ಮಾಡಿಕೊಳ್ಳುತ್ತಿರುವ ಶೇ.24.10 ರಡಿ ಪ.ಜಾತಿಯ/ಪಂಗಡದವರಿಗೆ, ಹಾಗೂ ಶೇ.7.25 ರಡಿ ಇತರೆ ಜಾತಿಗಳ ಫಲಾನುಭವಿಗಳಿಗೆ ಸಹಾಯಧನ, ವಿಶೇಷ ಚೇತನರಿಗೆ ವಿಮೆ ಸೌಲಭ್ಯಗಳನ್ನು ಕಲ್ಪಿಸುವುದು, ವಿಶೇಷ ಚೇತನರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ(2023-24), ಡೇ-ನಲ್ಮ್ ಯೋಜನೆಯಡಿ ವೈಯಕ್ತಿಕ ಸಾಲ ಯೋಜನೆ-(3) ಸಂಖ್ಯೆ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ರಚನೆ-(8) ಸಂಖ್ಯೆ, ಅಂಬೇಡ್ಕರ್ ಮತ್ತು ವಾಜಪೇಯಿ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಪೂರಕ ದಾಖಲಾತಿಗಳೊಂದಿಗೆ ಜುಲೈ 09 ಸಂಜೆ 5.00 ಗಂಟೆಯೊಳಗೆ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಮತ್ತು ನಿಗಧಿತ ನಮೂನೆಯ ಅರ್ಜಿಗಳಿಗಾಗಿ ಪಟ್ಟಣ ಪಂಚಾಯ್ತಿಯ ಯೋಜನಾ ಶಾಖೆಗೆ ಭೇಟಿ ನೀಡಬಹುದು ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…