ಮೈಸೂರು: 2024-25ನೇ ಸಾಲಿಗೆ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಬಡ ಜನರು ಮತ್ತು ವಿಶೇಷಚೇತನ ಬಡಜನರಿಗೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಸತಿ ಯೋಜನೆಯಡಿ ಆಯ್ಕೆ ಆಗಿ ಗೃಹ ನಿರ್ಮಾಣ ಕಾರ್ಯ ಕೈಗೊಂಡಿರುವವರಿಗೆ ಅಥವಾ ಸ್ವಂತವಾಗಿ ಗೃಹ ನಿರ್ಮಾಣ ಮಾಡಿಕೊಳ್ಳುತ್ತಿರುವ ಶೇ.24.10 ರಡಿ ಪ.ಜಾತಿಯ/ಪಂಗಡದವರಿಗೆ, ಹಾಗೂ ಶೇ.7.25 ರಡಿ ಇತರೆ ಜಾತಿಗಳ ಫಲಾನುಭವಿಗಳಿಗೆ ಸಹಾಯಧನ, ವಿಶೇಷ ಚೇತನರಿಗೆ ವಿಮೆ ಸೌಲಭ್ಯಗಳನ್ನು ಕಲ್ಪಿಸುವುದು, ವಿಶೇಷ ಚೇತನರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ(2023-24), ಡೇ-ನಲ್ಮ್ ಯೋಜನೆಯಡಿ ವೈಯಕ್ತಿಕ ಸಾಲ ಯೋಜನೆ-(3) ಸಂಖ್ಯೆ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ರಚನೆ-(8) ಸಂಖ್ಯೆ, ಅಂಬೇಡ್ಕರ್ ಮತ್ತು ವಾಜಪೇಯಿ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಪೂರಕ ದಾಖಲಾತಿಗಳೊಂದಿಗೆ ಜುಲೈ 09 ಸಂಜೆ 5.00 ಗಂಟೆಯೊಳಗೆ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಮತ್ತು ನಿಗಧಿತ ನಮೂನೆಯ ಅರ್ಜಿಗಳಿಗಾಗಿ ಪಟ್ಟಣ ಪಂಚಾಯ್ತಿಯ ಯೋಜನಾ ಶಾಖೆಗೆ ಭೇಟಿ ನೀಡಬಹುದು ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…