ಮೈಸೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಸ್ಕಿಲ್ ಟೆಕ್ನಿಷಿಯನ್ ತರಬೇತಿ ವಿದ್ಯಾರ್ಹತೆ : 8 ನೇ ತರಗತಿ ಪಾಸ್, ಸೆಲ್ಫ್ ಎಂಪ್ಲಾಯಿಡ್ ಟ್ರೇಲರಿಂಗ್ ತರಬೇತಿ ವಿದ್ಯಾರ್ಹತೆ : 8 ನೇ ತರಗತಿ , ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ ತರಬೇತಿ ವಿದ್ಯಾರ್ಹತೆ : 8 ನೇ ತರಗತಿ ಹಾಗೂ ಡೊಮೆಸ್ಟಿಕ್ ಡೇಟಾ ಎಂಟ್ರಿ ಆಪರೇಟರ್ ತರಬೇತಿ ವಿದ್ಯಾರ್ಹತೆ :10 ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿದ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಗೆ ಬೆಂಗಳೂರು ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತಿಯುಳ್ಳವರು ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ದೃಢೀಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮೇ 15 ರ ಸಂಜೆ 5 ಗಂಟೆಯೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. ಸಂ : 0821-2344661 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…