ಮೈಸೂರು

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು:   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) / ಮೊರಾರ್ಜಿ ದೇಸಾಯಿ (ನೂತನ) ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿರಿಯಾಪಟ್ಟಣದ ಹಲಗನಹಳ್ಳಿಯ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಹಿಂದಿ ಮತ್ತು ಗಣಿತ ವಿಷಯಕ್ಕೆ ಬಿಎ, ಬಿ.ಇಡಿ, ಬಿಎಸ್ಸಿ, ವಿದ್ಯಾರ್ಹತೆ, ಮೈಸೂರಿನ ಭರತನಗರದ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಕನ್ನಡ ಮತ್ತು ವಿಜ್ಞಾನ ವಿಷಯಕ್ಕೆ ಬಿಎ, ಬಿ.ಇಡಿ, ಬಿಎಸ್ಸಿ ವಿದ್ಯಾರ್ಹತೆ, ಲಷ್ಕರ್ ಮೊಹಲ್ಲಾದ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ದೈಹಿಕ ಶಿಕ್ಷಕ ವಿಷಯಕ್ಕೆ ಬಿ.ಪಿ.ಇಡಿ ವಿದ್ಯಾರ್ಹತೆ, ರಾಜೇಂದ್ರ ನಗರದ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಇಂಗ್ಲೀಷ್ ಮತ್ತು ಹಿಂದಿ ವಿಷಯಕ್ಕೆ ಬಿಎ ಅಥವಾ ಬಿಎಸ್ಸಿ, ಬಿ.ಇಡಿ, ವಿದ್ಯಾರ್ಹತೆ, ಹುಣಸೂರು ಟೌನ್‌ನ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಹಿಂದಿ ಮತ್ತು ದೈಹಿಕ ಶಿಕ್ಷಣ ವಿಷಯಕ್ಕೆ ಬಿಎ, ಬಿ.ಇಡಿ, ಬಿ.ಪಿ.ಇಡಿ ವಿದ್ಯಾರ್ಹತೆ, ತಿ.ನರಸೀಪುರದ ಅಲ್ಪಸಂಖ್ಯಾತರ ಮಾರಾರ್ಜಿ ದೇಸಾಯಿ ವಸತಿ ಶಾಲೆಯ(ನೂತನ) ಎಲ್ಲಾ ವಿಷಯಕ್ಕೆ, ಬಿಎ ಅಥವಾ ಬಿಎಸ್ಸಿ ಬಿ.ಇಡಿ ವಿದ್ಯಾರ್ಹತೆ, ಪಿರಿಯಾಪಟ್ಟಣ ತಾಲ್ಲೂಕಿನ ಅಲ್ಪಸಂಖ್ಯಾತರ ಮಾರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜಿಗೆ ಇಂಗ್ಲೀಷ್ ವಿಷಯಕ್ಕೆ ಬಿಎ ಅಥವಾ ಬಿಎಸ್ಸಿ ಬಿ.ಇಡಿ ವಿದ್ಯಾರ್ಹತೆ ಹಾಗೂ ಮೈಸೂರಿನ ದೊಡ್ಡಕಾನ್ಯದ ಅಲ್ಪಸಂಖ್ಯಾತರ ಡಾ||ಎ.ಪಿ.ಜೆ ಅಬ್ದುಲ್ ಕಲಾಂ, ವಸತಿ ಕಾಲೇಜಿಗೆ ಜೀವಶಾಸ್ತ್ರ ವಿಷಯಕ್ಕೆ ಎಂಎ ಎಂ.ಎಸ್ಸಿ ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 30 ಅಂತಿಮ ದಿನಾಂಕವಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕಡೆಯ ದಿನಾಂಕದೊಳಗೆ ಜಿಲ್ಲಾ ಕಛೇರಿಗೆ ಅಥವಾ ಸಂಬoಧಪಟ್ಟ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ, ಬೆಂಗಳೂರು-ಮೈಸೂರು ರಸ್ತೆಯ ಶೋಭ ಗಾರ್ಡನ್ ಪಕ್ಕದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನ ಆಜಾದ್ ಭವನವನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2422088/8951087207/8762864253, ಮೊರಾರ್ಜಿ ನೂತನ ವಸತಿ ಶಾಲೆ ತಿ.ನರಸೀಪುರ ಮಾಹಿತಿ ಕೇಂದ್ರದ ದೂ.ಸಂ: 8277775750, ಹುಣಸೂರು ಮಾಹಿತಿ ಕೇಂದ್ರದ ದೂ.ಸಂ: 9620750935 ಹಾಗೂ ಪಿರಿಯಾಪಟ್ಟಣ ಮಾಹಿತಿ ಕೇಂದ್ರದ ದೂ.ಸಂ: 6362661474 ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

56 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago