ಮೈಸೂರು

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು:   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) / ಮೊರಾರ್ಜಿ ದೇಸಾಯಿ (ನೂತನ) ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿರಿಯಾಪಟ್ಟಣದ ಹಲಗನಹಳ್ಳಿಯ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಹಿಂದಿ ಮತ್ತು ಗಣಿತ ವಿಷಯಕ್ಕೆ ಬಿಎ, ಬಿ.ಇಡಿ, ಬಿಎಸ್ಸಿ, ವಿದ್ಯಾರ್ಹತೆ, ಮೈಸೂರಿನ ಭರತನಗರದ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಕನ್ನಡ ಮತ್ತು ವಿಜ್ಞಾನ ವಿಷಯಕ್ಕೆ ಬಿಎ, ಬಿ.ಇಡಿ, ಬಿಎಸ್ಸಿ ವಿದ್ಯಾರ್ಹತೆ, ಲಷ್ಕರ್ ಮೊಹಲ್ಲಾದ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ದೈಹಿಕ ಶಿಕ್ಷಕ ವಿಷಯಕ್ಕೆ ಬಿ.ಪಿ.ಇಡಿ ವಿದ್ಯಾರ್ಹತೆ, ರಾಜೇಂದ್ರ ನಗರದ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಇಂಗ್ಲೀಷ್ ಮತ್ತು ಹಿಂದಿ ವಿಷಯಕ್ಕೆ ಬಿಎ ಅಥವಾ ಬಿಎಸ್ಸಿ, ಬಿ.ಇಡಿ, ವಿದ್ಯಾರ್ಹತೆ, ಹುಣಸೂರು ಟೌನ್‌ನ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಶಾಲೆಗೆ ಹಿಂದಿ ಮತ್ತು ದೈಹಿಕ ಶಿಕ್ಷಣ ವಿಷಯಕ್ಕೆ ಬಿಎ, ಬಿ.ಇಡಿ, ಬಿ.ಪಿ.ಇಡಿ ವಿದ್ಯಾರ್ಹತೆ, ತಿ.ನರಸೀಪುರದ ಅಲ್ಪಸಂಖ್ಯಾತರ ಮಾರಾರ್ಜಿ ದೇಸಾಯಿ ವಸತಿ ಶಾಲೆಯ(ನೂತನ) ಎಲ್ಲಾ ವಿಷಯಕ್ಕೆ, ಬಿಎ ಅಥವಾ ಬಿಎಸ್ಸಿ ಬಿ.ಇಡಿ ವಿದ್ಯಾರ್ಹತೆ, ಪಿರಿಯಾಪಟ್ಟಣ ತಾಲ್ಲೂಕಿನ ಅಲ್ಪಸಂಖ್ಯಾತರ ಮಾರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜಿಗೆ ಇಂಗ್ಲೀಷ್ ವಿಷಯಕ್ಕೆ ಬಿಎ ಅಥವಾ ಬಿಎಸ್ಸಿ ಬಿ.ಇಡಿ ವಿದ್ಯಾರ್ಹತೆ ಹಾಗೂ ಮೈಸೂರಿನ ದೊಡ್ಡಕಾನ್ಯದ ಅಲ್ಪಸಂಖ್ಯಾತರ ಡಾ||ಎ.ಪಿ.ಜೆ ಅಬ್ದುಲ್ ಕಲಾಂ, ವಸತಿ ಕಾಲೇಜಿಗೆ ಜೀವಶಾಸ್ತ್ರ ವಿಷಯಕ್ಕೆ ಎಂಎ ಎಂ.ಎಸ್ಸಿ ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 30 ಅಂತಿಮ ದಿನಾಂಕವಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕಡೆಯ ದಿನಾಂಕದೊಳಗೆ ಜಿಲ್ಲಾ ಕಛೇರಿಗೆ ಅಥವಾ ಸಂಬoಧಪಟ್ಟ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ, ಬೆಂಗಳೂರು-ಮೈಸೂರು ರಸ್ತೆಯ ಶೋಭ ಗಾರ್ಡನ್ ಪಕ್ಕದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನ ಆಜಾದ್ ಭವನವನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2422088/8951087207/8762864253, ಮೊರಾರ್ಜಿ ನೂತನ ವಸತಿ ಶಾಲೆ ತಿ.ನರಸೀಪುರ ಮಾಹಿತಿ ಕೇಂದ್ರದ ದೂ.ಸಂ: 8277775750, ಹುಣಸೂರು ಮಾಹಿತಿ ಕೇಂದ್ರದ ದೂ.ಸಂ: 9620750935 ಹಾಗೂ ಪಿರಿಯಾಪಟ್ಟಣ ಮಾಹಿತಿ ಕೇಂದ್ರದ ದೂ.ಸಂ: 6362661474 ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago