ಮೈಸೂರು

ಪತ್ರಕರ್ತರ ಉಚಿತ ಬಸ್‌ ಪಾಸ್‌ಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು ೧೧ ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ‘ಸೇವಾಸಿಂಧು‘ ಪೋರ್ಟಲ್ ಮೂಲಕ ಆನ್ http://(https://sevasindhu.karnataka.gov.in)ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನು ಓದಿ : ಕ್ಷೀಣಿಸುತ್ತಿರುವ ಲಿಂಗಾನುಪಾತ : ಸುಪ್ರೀಂ ನ್ಯಾ.ಬಿ.ವಿ ನಾಗರತ್ನ ಕಳವಳ

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಽಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ‘ಸೇವಾಸಿಂಧು‘ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

28 mins ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

37 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

49 mins ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

60 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

1 hour ago