ಮೈಸೂರು

ಪತ್ರಕರ್ತರ ಉಚಿತ ಬಸ್‌ ಪಾಸ್‌ಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು ೧೧ ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ‘ಸೇವಾಸಿಂಧು‘ ಪೋರ್ಟಲ್ ಮೂಲಕ ಆನ್ http://(https://sevasindhu.karnataka.gov.in)ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನು ಓದಿ : ಕ್ಷೀಣಿಸುತ್ತಿರುವ ಲಿಂಗಾನುಪಾತ : ಸುಪ್ರೀಂ ನ್ಯಾ.ಬಿ.ವಿ ನಾಗರತ್ನ ಕಳವಳ

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಽಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ‘ಸೇವಾಸಿಂಧು‘ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

5 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago