ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 02 ಮತ್ತು ಪರಿಶಿಷ್ಟ ಪಂಗಡದ 01 ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಮೈಸೂರು ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ: ಡೆವಿಲ್ ಸಿನಿಮಾ ಬ್ಲಾಕ್ ಬಸ್ಟರ್ ಆಗಲಿ: ನಟ ದರ್ಶನ್ಗೆ ರಿಷಬ್ ಶೆಟ್ಟಿ ವಿಶ್
ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದoದು ಅಭ್ಯರ್ಥಿಗಳ ವಯೋಮಿತಿ 35 ವರ್ಷ ಒಳಗಿರಬೇಕು.
ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೇ ಫಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ಧನ್ವಂತರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರಮೇಶ್ ಅವರ ದೂ.ಸಂ: 9844393691 ಅನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…