ಮೈಸೂರು

ಮಧ್ಯಸ್ಥಿಕೆದಾರರು ಪ್ರಕರಣ ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ನ್ಯಾ.ರವೀಂದ್ರ ಹೆಗಡೆ

ಮಧ್ಯಸ್ಥಿಕೆದಾರರ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ನ್ಯಾಯಾಧೀಶ ಸಲಹೆ

ಮೈಸೂರು: ಮಧ್ಯಸ್ಥಿಕೆದಾರರು ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗದೆ ಇರಬಹುದು, ಆದರೆ ಅವುಗಳನ್ನು ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಹೆಗಡೆ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಕರ್ನಾಟಕ ಮಧ್ಯಸ್ಥಿಕಾ ಕೇಂದ್ರ, ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ಶನಿವಾರ ನಡೆದ ಮೈಸೂರು, ಚಾಮರಾಜನಗರ ಮತ್ತು ಕೊಡಗು-ಮಡಿಕೇರಿ ಜಿಲ್ಲೆಯ ಮಧ್ಯಸ್ಥಿಕಗಾರರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು.

ಮಧ್ಯಸ್ಥಿಕಗಾರರು ಬಹಳ ಹಿಂದಿನಿಂದ ನೇಮಕವಾಗಿದ್ದಾರೆ. ತುಂಬಾ ಪ್ರಕರಣದಲ್ಲಿ ಅಂಕಿ ಅಂಶ ಗಮನಿಸಿದಾಗ ಇನ್ನು ಸುಧಾರಣೆ ಅಗಬೇಕು. ಬೆಂಗಳೂರಿಗೆ ಸ್ಪರ್ಧೆ ನೀಡುವ ನಿಟ್ಟಿನಲ್ಲಿ ಉದ್ದೇಶ ಈಡೇರಬೇಕು. ಸಮಯ ಪಾಲನೆ ಮಾಡಬೇಕು. ನಿಮ್ಮ ಸಮಯ ಪಾಲನೆ ಹಾಗೂ ಪ್ರಕರಣದ ಫಲಿತಾಂಶಕ್ಕೆ ಜನರು‌ ಅಕರ್ಷಿತರಾಗಬೇಕು ಎಂದು ಸಲಹೆ‌ ನೀಡಿದರು.

ಪ್ರತಿ ಜಿಲ್ಲೆಗೆ ೨೦ ಮಂದಿ ಆಯ್ಕೆ ಮಾಡಲಾಗಿದೆ. ಈ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶೆ ಸಾವಿತ್ರಿ ಎಸ್.ಕುಜ್ಜಿ ಮಾತನಾಡಿ, ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ಹೆಚ್ಚಿದೆ. ಹೆಚ್ಚಿನ‌ ಪ್ರಮಾಣದಲ್ಲಿ ಮದ್ಯಸ್ಥಿಕೆದಾರರು ಪಾತ್ರವಹಿಸಬೇಕು. ಎಲ್ಲ ಪ್ರಕರಣ ಒಂದೆ ರೀತಿಯಲ್ಲಿರುವುದಿಲ್ಲ. ಇದನ್ನ ಗಮನಹರಿಸಿ ಪ್ರಕರಣ ಬಗೆಹರಿಸಲು ಮುಂದಾಗಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿ, ವ್ಯಾಜ್ಯ ಪ್ರಕರಣ ಪರಿಹರಿಸುವಲ್ಲಿ ಮಧ್ಯಸ್ಥಿಕೆದಾರರ ಪಾತ್ರ ದೊಡ್ಡದು. ಬಹಳ ತಾಳ್ಮೆ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಮಧ್ಯಸ್ಥಿಕೆ ತರಬೇತುದಾರರಾದ ಎಸ್.ಆರ್‌.ಅನುರಾಧಾ, ಬೃಂದಾ ನಂದಕುಮಾರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿ.ಜಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

6 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

7 hours ago