ಮೈಸೂರು

ವಾಹನ ಸವಾರರು ಹೆಲ್ಮೆಟ್‌ ಬಳಸುತ್ತಿದ್ದಾರೆಯೇ? : ಜಾಗೃತಿ ಮೂಡಿಸಲು ಬಂದ ಯಮಧರ್ಮ

ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ, ‘ಯಮಧರ್ಮನ ವೇಷಧರಿಸಿ ಸಂಚಾರ ನಿಯಮ ಪಾಲಿಸದಿದ್ದರೆ ನೀನು ಸೀದಾ ಯಮನ ಬಳಿ’ ಎಂಬ ಘೋಷ ವಾಕ್ಯದೊಂದಿಗೆ ವಾಹನ ಸವಾರರ ಗಮನ ಸೆಳೆದರು. ಡಿಸಿಪಿ ಕೆ.ಎಸ್.ಸುಂದರ್ ರಾಜ್ ಎಳ್ಳು ಬೆಲ್ಲ ಹಾಗೂ ಗುಲಾಬಿ ನೀಡಿ ಸಂಚಾರ ನಿಯಮದ ಬಗ್ಗೆ ಜಾಗೃತಿ ಮೂಡಿಸಿದರು.

ಪೊಲೀಸರು, ವಾಹನಗಳನ್ನು ತಡೆಯುತ್ತಿದ್ದುದನ್ನು ಗಮನಿಸಿದ ಕೆಲವರು ಪರಾರಿ ಆದರೆ, ಕೆಲವರು ಸಿಕ್ಕಿಕೊಂಡರು. ದಂಡ ಕಟ್ಟಬೇಕೆನ್ನುವ ಚಿಂತೆ, ತಪ್ಪು ಮಾಡಿದ ಭಾವದಿಂದ ಅವರ ಮುಖ ಕಳೆಗುಂದಿತ್ತು.

ಚಾಲಕರು ವಾಹನದಿಂದ ಇಳಿದು ದಂಡವನ್ನು ಕಟ್ಟಲು ಹಣಕ್ಕಾಗಿ ಜೇಬಿಗೆ ಕೈಹಾಕುತ್ತಿದ್ದಂತೆ, ಪೊಲೀಸರು ಗುಲಾಬಿ ಹೂ ಹಾಗೂ ಎಳ್ಳು ಬೆಲ್ಲ ನೀಡಲು ಮುಂದಾಗುತ್ತಿದ್ದರು. ಎಳ್ಳು ಬೆಲ್ಲ, ಹೂ ಸ್ವೀಕರಿಸಿದವರು ಮತ್ತೆ ಸಂಚಾರ ನಿಯಮ ಉಲ್ಲಂಘಿಸಿ, ತಪ್ಪು ಮಾಡುವುದಿಲ್ಲ ಎನ್ನುವ ಭರವಸೆ ನೀಡುತ್ತಿದ್ದುದು ವಿಶೇಷವಾಗಿತ್ತು. ಸಂಚಾರ ನಿಯಮಗಳನ್ನು ಪಾಲಿಸಿ, ವಾಹನದ ದಾಖಲಾತಿಗಳ ಸುರಕ್ಷತೆಗೆ ಆದ್ಯತೆ ನೀಡಿ, ವಿಮೆ ಮಾಡಿಸಿ, ಓವರ್ ಟೇಕ್ ಮಾಡುವುದನ್ನು ನಿಲ್ಲಿಸಬೇಕು, ಅಪಘಾತವಾಗದಂತೆ ಎಚ್ಚರವಹಿಸಬೇಕು, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸದಿರಿ, ಸುರಕ್ಷಿತ ವಾಹನ ಚಾಲನೆಗೆ ಮುಂದಾಗಿ… ಹೀಗೆ ಪೊಲೀಸರು ವಾಹನ ಸವಾರರಿಗೆ ಹತ್ತಾರು ಸಲಹೆಗಳನ್ನು ಪೊಲೀಸರು ನೀಡಿದರು.

ಡಿಸಿಪಿ ಸುಂದರ್ ರಾಜ್ ಅವರು ಮಾತನಾಡಿ, ದುಡಿಯುವ ವ್ಯಕ್ತಿಗೆ ಪ್ರಾಣ ಹಾನಿಯಾದರೆ ಆ ಕುಟುಂಬ ಬೀದಿಗೆ ಬರುತ್ತದೆ ಎಂಬುದನ್ನು ಪ್ರತಿಯೊಬ್ಬ ಚಾಲಕ ಮತ್ತು ಸವಾರರು ಮನಸ್ಸಿನಲ್ಲಿ ಸದಾ ಇಟ್ಟುಕೊಳ್ಳಬೇಕು. ಯಾವುದೇ ಪ್ರಾಣಹಾನಿ ಆಗದಂತೆ ವಾಹನ ಸಂಚಾರ ಮಾಡುವಾಗ ಸಂಚಾರ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಚಾಲನೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಿಳಿ ಹೇಳಿದರು.

ಎಸಿಪಿ ಶಿವಶಂಕರ್ ಮಾತನಾಡಿ, ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ಹಾಗೂ ತಿಳಿವಳಿಕೆ ಇದ್ದರೂ ಕೂಡ ಸಾರ್ವಜನಿಕರು ಅದನ್ನು ಪಾಲಿಸುತ್ತಿಲ್ಲ. ಅಪಘಾತಗಳನ್ನು ತಪ್ಪಿಸಲು ಸವಾರರು ಹಾಗೂ ಚಾಲಕರ ಮನಸ್ಥಿತಿ ಬದಲಾಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ದೇವರಾಜ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿ.ಡಿ.ಮಮತಾ, ಸೀಟ್‌ಎಡ್ಜ್ ಚಿತ್ರದ ನಾಯಕ ಸಿದ್ದು ಮೂಲಿಮನಿ, ನಾಯಕನಟಿ ರವೀಕ್ಷಾ ಶೆಟ್ಟಿ, ಗಂಧದಗುಡಿ ಫೌಂಡೇಶನ್‌ನ ರಾಜ್ಯಾಧ್ಯಕ್ಷ ಆರ್ಯನ್ ಗಂಧದಗುಡಿ, ಮತ್ತಿತರರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

11 mins ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

23 mins ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

2 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

2 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

2 hours ago

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ…

3 hours ago