ಮೈಸೂರು

ವಾಹನ ಸವಾರರು ಹೆಲ್ಮೆಟ್‌ ಬಳಸುತ್ತಿದ್ದಾರೆಯೇ? : ಜಾಗೃತಿ ಮೂಡಿಸಲು ಬಂದ ಯಮಧರ್ಮ

ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ, ‘ಯಮಧರ್ಮನ ವೇಷಧರಿಸಿ ಸಂಚಾರ ನಿಯಮ ಪಾಲಿಸದಿದ್ದರೆ ನೀನು ಸೀದಾ ಯಮನ ಬಳಿ’ ಎಂಬ ಘೋಷ ವಾಕ್ಯದೊಂದಿಗೆ ವಾಹನ ಸವಾರರ ಗಮನ ಸೆಳೆದರು. ಡಿಸಿಪಿ ಕೆ.ಎಸ್.ಸುಂದರ್ ರಾಜ್ ಎಳ್ಳು ಬೆಲ್ಲ ಹಾಗೂ ಗುಲಾಬಿ ನೀಡಿ ಸಂಚಾರ ನಿಯಮದ ಬಗ್ಗೆ ಜಾಗೃತಿ ಮೂಡಿಸಿದರು.

ಪೊಲೀಸರು, ವಾಹನಗಳನ್ನು ತಡೆಯುತ್ತಿದ್ದುದನ್ನು ಗಮನಿಸಿದ ಕೆಲವರು ಪರಾರಿ ಆದರೆ, ಕೆಲವರು ಸಿಕ್ಕಿಕೊಂಡರು. ದಂಡ ಕಟ್ಟಬೇಕೆನ್ನುವ ಚಿಂತೆ, ತಪ್ಪು ಮಾಡಿದ ಭಾವದಿಂದ ಅವರ ಮುಖ ಕಳೆಗುಂದಿತ್ತು.

ಚಾಲಕರು ವಾಹನದಿಂದ ಇಳಿದು ದಂಡವನ್ನು ಕಟ್ಟಲು ಹಣಕ್ಕಾಗಿ ಜೇಬಿಗೆ ಕೈಹಾಕುತ್ತಿದ್ದಂತೆ, ಪೊಲೀಸರು ಗುಲಾಬಿ ಹೂ ಹಾಗೂ ಎಳ್ಳು ಬೆಲ್ಲ ನೀಡಲು ಮುಂದಾಗುತ್ತಿದ್ದರು. ಎಳ್ಳು ಬೆಲ್ಲ, ಹೂ ಸ್ವೀಕರಿಸಿದವರು ಮತ್ತೆ ಸಂಚಾರ ನಿಯಮ ಉಲ್ಲಂಘಿಸಿ, ತಪ್ಪು ಮಾಡುವುದಿಲ್ಲ ಎನ್ನುವ ಭರವಸೆ ನೀಡುತ್ತಿದ್ದುದು ವಿಶೇಷವಾಗಿತ್ತು. ಸಂಚಾರ ನಿಯಮಗಳನ್ನು ಪಾಲಿಸಿ, ವಾಹನದ ದಾಖಲಾತಿಗಳ ಸುರಕ್ಷತೆಗೆ ಆದ್ಯತೆ ನೀಡಿ, ವಿಮೆ ಮಾಡಿಸಿ, ಓವರ್ ಟೇಕ್ ಮಾಡುವುದನ್ನು ನಿಲ್ಲಿಸಬೇಕು, ಅಪಘಾತವಾಗದಂತೆ ಎಚ್ಚರವಹಿಸಬೇಕು, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸದಿರಿ, ಸುರಕ್ಷಿತ ವಾಹನ ಚಾಲನೆಗೆ ಮುಂದಾಗಿ… ಹೀಗೆ ಪೊಲೀಸರು ವಾಹನ ಸವಾರರಿಗೆ ಹತ್ತಾರು ಸಲಹೆಗಳನ್ನು ಪೊಲೀಸರು ನೀಡಿದರು.

ಡಿಸಿಪಿ ಸುಂದರ್ ರಾಜ್ ಅವರು ಮಾತನಾಡಿ, ದುಡಿಯುವ ವ್ಯಕ್ತಿಗೆ ಪ್ರಾಣ ಹಾನಿಯಾದರೆ ಆ ಕುಟುಂಬ ಬೀದಿಗೆ ಬರುತ್ತದೆ ಎಂಬುದನ್ನು ಪ್ರತಿಯೊಬ್ಬ ಚಾಲಕ ಮತ್ತು ಸವಾರರು ಮನಸ್ಸಿನಲ್ಲಿ ಸದಾ ಇಟ್ಟುಕೊಳ್ಳಬೇಕು. ಯಾವುದೇ ಪ್ರಾಣಹಾನಿ ಆಗದಂತೆ ವಾಹನ ಸಂಚಾರ ಮಾಡುವಾಗ ಸಂಚಾರ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಚಾಲನೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಿಳಿ ಹೇಳಿದರು.

ಎಸಿಪಿ ಶಿವಶಂಕರ್ ಮಾತನಾಡಿ, ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ಹಾಗೂ ತಿಳಿವಳಿಕೆ ಇದ್ದರೂ ಕೂಡ ಸಾರ್ವಜನಿಕರು ಅದನ್ನು ಪಾಲಿಸುತ್ತಿಲ್ಲ. ಅಪಘಾತಗಳನ್ನು ತಪ್ಪಿಸಲು ಸವಾರರು ಹಾಗೂ ಚಾಲಕರ ಮನಸ್ಥಿತಿ ಬದಲಾಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ದೇವರಾಜ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿ.ಡಿ.ಮಮತಾ, ಸೀಟ್‌ಎಡ್ಜ್ ಚಿತ್ರದ ನಾಯಕ ಸಿದ್ದು ಮೂಲಿಮನಿ, ನಾಯಕನಟಿ ರವೀಕ್ಷಾ ಶೆಟ್ಟಿ, ಗಂಧದಗುಡಿ ಫೌಂಡೇಶನ್‌ನ ರಾಜ್ಯಾಧ್ಯಕ್ಷ ಆರ್ಯನ್ ಗಂಧದಗುಡಿ, ಮತ್ತಿತರರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago