ಮೈಸೂರು

ಕೈ ಶಾಸಕ ಹರೀಶ್‌ಗೌಡಗೆ ಹನಿಟ್ರ್ಯಾಪ್‌ ಮಾಡಿದ್ದ ಆರೋಪಿಗಳ ಬಂಧನ

ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್‌ ಮೇಲೆ ಮಾಡಿದ್ದ  ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ.

ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಈ ಮೂವರ ಗ್ಯಾಂಗ್‌ ಜೊತೆ ಓರ್ವ ಯುವತಿ ಭಾಗಿಯಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆರೋಪಿಗಳ ಗ್ಯಾಂಗ್‌ ಕೈ ಶಾಸಕ ಹರೀಶ್‌ಗೌಡ ಅವರ ವಿರುದ್ಧವೇ ನಕಲಿ ಹನಿಟ್ರ್ಯಾಪ್‌ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಿ, ಕೋಟ್ಯಾಂತರ ಹಣಕ್ಕೆ ಬೇಡಿಕೆ ಇಟ್ಟಿದರು. ಈ ಬಗ್ಗೆ ಶಾಸಕರು ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ್ವಯ ಕೇಸ್‌ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್‌ ಮಾಡುತ್ತಿದ್ದ ಜಾಲವನ್ನು ಭೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿಚಾರಣೆ ವೇಳೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ಈ ಗ್ಯಾಂಗ್‌ ವಿಐಪಿಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಅವರನ್ನೇ ಫಾಲೋ ಮಾಡಿ ಅವರ ಚಲನವಲನದ ಮೇಲೆ ಕಣ್ಣಿಟ್ಟು, ಬಳಿಕ ಅವರು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್ ರೂಮ್‌ ಬುಕ್ಕಿಂಗ್‌ ಹಾಗೂ ಚೆಕ್-ಇನ್‌, ಚೆಕ್-ಔಟ್‌ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಬಳಿಕ ಆರೋಪಿಗಳು ಅದೇ ರೂಮ್‌ಗಳನ್ನೇ ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಂಡು, ವಿಐಪಿಗಳ ಈ ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ನಕಲಿ ವಿಡಿಯೋ ಸೃಷ್ಟಿಸುತ್ತಿದ್ದರು. ಬಳಿಕ ಆ ವಿಡಿಯೋವನ್ನು ವಿಐಪಿಗಳಿಗೆ ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಅಷ್ಟೆ ಅಲ್ಲದೇ ಹಣ ನೀಡದಿದ್ದರೇ ವಿಡಿಯೋ ವೈರಲ್‌ ಮಾಡಿ ಜೊತೆಗೆ ಪೊಲೀಸರಿಗೆ ಕೊಡುವುದಾಗಿ ಬ್ಲ್ಯಾಕ್‌ ಮೇಲೆ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಶಾಸಕ ಹರೀಶ್‌ಗೌಡ ಮಾತನಾಡಿ, ನನ್ನ ಪರಿಚಿತರು ಹಾಗೂ ಗೌರವಯುತವಾಗಿ ಬದುಕುತ್ತಿರುವವರಿಗೆ ಹನಿಟ್ರ್ಯಾಪ್‌ ಮಾಡಲಾಗಿತ್ತು. ಎರಡು ನಂಬರ್‌ಗಳಿಂದ ಕರೆ ಮಾಡುತ್ತಿದ್ದರು. ಆ ನಂಬರ್‌ ಮೂಲಕ ಟ್ರೇಸ್‌ ಮಾಡಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಾನೇ ದೂರು ನೀಡಿದ್ದೆ. ಇಬ್ಬರ ಬಂಧನವಾಗಿದೆ. ತನಿಖೆ ನಡೆಯುತ್ತಿದ್ದು, ಕಾನೂನಾತ್ಮಕವಾಗಿ ಏನು ಆಗಬೇಕು ಆಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಮಾತನಾಡಿ, ಕೆಲ ದಿನಗಳ ಹಿಂದೆ ಸಿಸಿಬಿ ಠಾಣೆಗೆ ಹನಿಟ್ರ್ಯಾಪ್‌ ಬಗ್ಗೆ ದೂರು ಬಂದಿತ್ತು. ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಅವರ ಹೇಳಿಕೆ ಪಡೆದುಕೊಳ್ಳುತ್ತಿದ್ದೇವೆ. ಈ ಗ್ಯಾಂಗ್‌ನಲ್ಲಿ ಮೂವರು ಇರುವುದು ಗೊತ್ತಾಗಿದೆ. ಇಬ್ಬರ ಬಂಧನವಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಉದ್ಯಮಿಗಳು ಹಾಗೂ ಉಪನ್ಯಾಸಕರಿಗೂ ಕರೆ ಮಾಡಿ ಗ್ಯಾಂಗ್‌ ಹಣಕ್ಕೆ ಬೇಡಿಕೆ ಇಟ್ಟಿದೆ. ಕಾನೂನು ಕ್ರಮ ಆಗಲಿದೆ ಎಂದರು.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

7 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

11 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

11 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

11 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

12 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

12 hours ago