ಮೈಸೂರು

ಕೈ ಶಾಸಕ ಹರೀಶ್‌ಗೌಡಗೆ ಹನಿಟ್ರ್ಯಾಪ್‌ ಮಾಡಿದ್ದ ಆರೋಪಿಗಳ ಬಂಧನ

ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್‌ ಮೇಲೆ ಮಾಡಿದ್ದ  ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ.

ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಈ ಮೂವರ ಗ್ಯಾಂಗ್‌ ಜೊತೆ ಓರ್ವ ಯುವತಿ ಭಾಗಿಯಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆರೋಪಿಗಳ ಗ್ಯಾಂಗ್‌ ಕೈ ಶಾಸಕ ಹರೀಶ್‌ಗೌಡ ಅವರ ವಿರುದ್ಧವೇ ನಕಲಿ ಹನಿಟ್ರ್ಯಾಪ್‌ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಿ, ಕೋಟ್ಯಾಂತರ ಹಣಕ್ಕೆ ಬೇಡಿಕೆ ಇಟ್ಟಿದರು. ಈ ಬಗ್ಗೆ ಶಾಸಕರು ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ್ವಯ ಕೇಸ್‌ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್‌ ಮಾಡುತ್ತಿದ್ದ ಜಾಲವನ್ನು ಭೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿಚಾರಣೆ ವೇಳೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ಈ ಗ್ಯಾಂಗ್‌ ವಿಐಪಿಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಅವರನ್ನೇ ಫಾಲೋ ಮಾಡಿ ಅವರ ಚಲನವಲನದ ಮೇಲೆ ಕಣ್ಣಿಟ್ಟು, ಬಳಿಕ ಅವರು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್ ರೂಮ್‌ ಬುಕ್ಕಿಂಗ್‌ ಹಾಗೂ ಚೆಕ್-ಇನ್‌, ಚೆಕ್-ಔಟ್‌ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಬಳಿಕ ಆರೋಪಿಗಳು ಅದೇ ರೂಮ್‌ಗಳನ್ನೇ ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಂಡು, ವಿಐಪಿಗಳ ಈ ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ನಕಲಿ ವಿಡಿಯೋ ಸೃಷ್ಟಿಸುತ್ತಿದ್ದರು. ಬಳಿಕ ಆ ವಿಡಿಯೋವನ್ನು ವಿಐಪಿಗಳಿಗೆ ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಅಷ್ಟೆ ಅಲ್ಲದೇ ಹಣ ನೀಡದಿದ್ದರೇ ವಿಡಿಯೋ ವೈರಲ್‌ ಮಾಡಿ ಜೊತೆಗೆ ಪೊಲೀಸರಿಗೆ ಕೊಡುವುದಾಗಿ ಬ್ಲ್ಯಾಕ್‌ ಮೇಲೆ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಶಾಸಕ ಹರೀಶ್‌ಗೌಡ ಮಾತನಾಡಿ, ನನ್ನ ಪರಿಚಿತರು ಹಾಗೂ ಗೌರವಯುತವಾಗಿ ಬದುಕುತ್ತಿರುವವರಿಗೆ ಹನಿಟ್ರ್ಯಾಪ್‌ ಮಾಡಲಾಗಿತ್ತು. ಎರಡು ನಂಬರ್‌ಗಳಿಂದ ಕರೆ ಮಾಡುತ್ತಿದ್ದರು. ಆ ನಂಬರ್‌ ಮೂಲಕ ಟ್ರೇಸ್‌ ಮಾಡಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಾನೇ ದೂರು ನೀಡಿದ್ದೆ. ಇಬ್ಬರ ಬಂಧನವಾಗಿದೆ. ತನಿಖೆ ನಡೆಯುತ್ತಿದ್ದು, ಕಾನೂನಾತ್ಮಕವಾಗಿ ಏನು ಆಗಬೇಕು ಆಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಮಾತನಾಡಿ, ಕೆಲ ದಿನಗಳ ಹಿಂದೆ ಸಿಸಿಬಿ ಠಾಣೆಗೆ ಹನಿಟ್ರ್ಯಾಪ್‌ ಬಗ್ಗೆ ದೂರು ಬಂದಿತ್ತು. ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಅವರ ಹೇಳಿಕೆ ಪಡೆದುಕೊಳ್ಳುತ್ತಿದ್ದೇವೆ. ಈ ಗ್ಯಾಂಗ್‌ನಲ್ಲಿ ಮೂವರು ಇರುವುದು ಗೊತ್ತಾಗಿದೆ. ಇಬ್ಬರ ಬಂಧನವಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಉದ್ಯಮಿಗಳು ಹಾಗೂ ಉಪನ್ಯಾಸಕರಿಗೂ ಕರೆ ಮಾಡಿ ಗ್ಯಾಂಗ್‌ ಹಣಕ್ಕೆ ಬೇಡಿಕೆ ಇಟ್ಟಿದೆ. ಕಾನೂನು ಕ್ರಮ ಆಗಲಿದೆ ಎಂದರು.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago