ಮೈಸೂರು

ಕೈ ಶಾಸಕ ಹರೀಶ್‌ಗೌಡಗೆ ಹನಿಟ್ರ್ಯಾಪ್‌ ಮಾಡಿದ್ದ ಆರೋಪಿಗಳ ಬಂಧನ

ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್‌ ಮೇಲೆ ಮಾಡಿದ್ದ  ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ.

ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಈ ಮೂವರ ಗ್ಯಾಂಗ್‌ ಜೊತೆ ಓರ್ವ ಯುವತಿ ಭಾಗಿಯಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆರೋಪಿಗಳ ಗ್ಯಾಂಗ್‌ ಕೈ ಶಾಸಕ ಹರೀಶ್‌ಗೌಡ ಅವರ ವಿರುದ್ಧವೇ ನಕಲಿ ಹನಿಟ್ರ್ಯಾಪ್‌ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಿ, ಕೋಟ್ಯಾಂತರ ಹಣಕ್ಕೆ ಬೇಡಿಕೆ ಇಟ್ಟಿದರು. ಈ ಬಗ್ಗೆ ಶಾಸಕರು ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ್ವಯ ಕೇಸ್‌ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್‌ ಮಾಡುತ್ತಿದ್ದ ಜಾಲವನ್ನು ಭೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿಚಾರಣೆ ವೇಳೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ಈ ಗ್ಯಾಂಗ್‌ ವಿಐಪಿಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಅವರನ್ನೇ ಫಾಲೋ ಮಾಡಿ ಅವರ ಚಲನವಲನದ ಮೇಲೆ ಕಣ್ಣಿಟ್ಟು, ಬಳಿಕ ಅವರು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್ ರೂಮ್‌ ಬುಕ್ಕಿಂಗ್‌ ಹಾಗೂ ಚೆಕ್-ಇನ್‌, ಚೆಕ್-ಔಟ್‌ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಬಳಿಕ ಆರೋಪಿಗಳು ಅದೇ ರೂಮ್‌ಗಳನ್ನೇ ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಂಡು, ವಿಐಪಿಗಳ ಈ ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ನಕಲಿ ವಿಡಿಯೋ ಸೃಷ್ಟಿಸುತ್ತಿದ್ದರು. ಬಳಿಕ ಆ ವಿಡಿಯೋವನ್ನು ವಿಐಪಿಗಳಿಗೆ ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಅಷ್ಟೆ ಅಲ್ಲದೇ ಹಣ ನೀಡದಿದ್ದರೇ ವಿಡಿಯೋ ವೈರಲ್‌ ಮಾಡಿ ಜೊತೆಗೆ ಪೊಲೀಸರಿಗೆ ಕೊಡುವುದಾಗಿ ಬ್ಲ್ಯಾಕ್‌ ಮೇಲೆ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಶಾಸಕ ಹರೀಶ್‌ಗೌಡ ಮಾತನಾಡಿ, ನನ್ನ ಪರಿಚಿತರು ಹಾಗೂ ಗೌರವಯುತವಾಗಿ ಬದುಕುತ್ತಿರುವವರಿಗೆ ಹನಿಟ್ರ್ಯಾಪ್‌ ಮಾಡಲಾಗಿತ್ತು. ಎರಡು ನಂಬರ್‌ಗಳಿಂದ ಕರೆ ಮಾಡುತ್ತಿದ್ದರು. ಆ ನಂಬರ್‌ ಮೂಲಕ ಟ್ರೇಸ್‌ ಮಾಡಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಾನೇ ದೂರು ನೀಡಿದ್ದೆ. ಇಬ್ಬರ ಬಂಧನವಾಗಿದೆ. ತನಿಖೆ ನಡೆಯುತ್ತಿದ್ದು, ಕಾನೂನಾತ್ಮಕವಾಗಿ ಏನು ಆಗಬೇಕು ಆಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಮಾತನಾಡಿ, ಕೆಲ ದಿನಗಳ ಹಿಂದೆ ಸಿಸಿಬಿ ಠಾಣೆಗೆ ಹನಿಟ್ರ್ಯಾಪ್‌ ಬಗ್ಗೆ ದೂರು ಬಂದಿತ್ತು. ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಅವರ ಹೇಳಿಕೆ ಪಡೆದುಕೊಳ್ಳುತ್ತಿದ್ದೇವೆ. ಈ ಗ್ಯಾಂಗ್‌ನಲ್ಲಿ ಮೂವರು ಇರುವುದು ಗೊತ್ತಾಗಿದೆ. ಇಬ್ಬರ ಬಂಧನವಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಉದ್ಯಮಿಗಳು ಹಾಗೂ ಉಪನ್ಯಾಸಕರಿಗೂ ಕರೆ ಮಾಡಿ ಗ್ಯಾಂಗ್‌ ಹಣಕ್ಕೆ ಬೇಡಿಕೆ ಇಟ್ಟಿದೆ. ಕಾನೂನು ಕ್ರಮ ಆಗಲಿದೆ ಎಂದರು.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago