ಮೈಸೂರು : ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷಾ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಿತಿ ವತಿಯಿಂದ ಅವರನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇವೆ. ಇವರು ಸಂಘರ್ಷಕ್ಕೂ ಸಿದ್ದ ಎಂಬ ಪದ ಬಳಸಿದ್ದಾರೆ. ಅವರನ್ನು ಯಾರು ಸಂಘರ್ಷಕ್ಕೆ ಕರೆದಿದ್ದಾರೆ ಅವರೊಟ್ಟಿಗೆ ಸಂಘರ್ಷ ಮಾಡಲಿ. ಅವರ ಹೇಳಿಕೆ ನೋಡುತ್ತ ಕುಳಿತಿರುವ ಪೋಲಿಸರು ಮತ್ತು ಜಿಲ್ಲಾಡಳಿತ ಈಗಾಗಲೇ ಅವರನ್ನು ಬಂಧಿಸಬೇಕಿತ್ತು ಎಂದು ಕಿಡಿಕಾರಿದ್ದಾರೆ.
ಸಂಸದ ಪ್ರತಾಪ್ ಸಿಂಹ ತಮ್ಮ ರಾಜಕೀಯಕ್ಕಾಗಿ ಚಾಮುಂಡಿ ಚಲೋ ಕರೆ ನೀಡಿದ್ದಾರೆ. ನಾವು ಚಾಮುಂಡಿ ವಿರೋಧಿಗಳಲ್ಲ. ಪ್ರತಾಪ್ ಸಿಂಹ ಅವರಂತರಹ ಸಂಸದರನ್ನು ನಾನು ಕಂಡಿಲ್ಲ. ವೈಯಕ್ತಿಕ ದ್ವೇಷಕ್ಕಿಳಿಯುವುದು ನಮ್ಮ ಮನಸ್ಥಿತಿಯಲ್ಲ. ಹೀಗಾಗಿ ನಾವು ಯಾವ ಸಂಘರ್ಷಕ್ಕೂ ಇಳಿಯದೇ ಕಾರ್ಯಕ್ರಮ ಮಾಡುತ್ತೇವೆ ಎಂದರು.
ನಾವು ಬೇರೊಬ್ಬರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುವುದಿಲ್ಲ. ಅವರ ಪಾಡಿಗೆ ಅವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ, ನಾವು ನಮ್ಮ ಪಾಡಿಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…
ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…
ನಂಜನಗೂಡು : ಮಾರ್ಚ್ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…