ಮೈಸೂರು : ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷಾ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಿತಿ ವತಿಯಿಂದ ಅವರನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇವೆ. ಇವರು ಸಂಘರ್ಷಕ್ಕೂ ಸಿದ್ದ ಎಂಬ ಪದ ಬಳಸಿದ್ದಾರೆ. ಅವರನ್ನು ಯಾರು ಸಂಘರ್ಷಕ್ಕೆ ಕರೆದಿದ್ದಾರೆ ಅವರೊಟ್ಟಿಗೆ ಸಂಘರ್ಷ ಮಾಡಲಿ. ಅವರ ಹೇಳಿಕೆ ನೋಡುತ್ತ ಕುಳಿತಿರುವ ಪೋಲಿಸರು ಮತ್ತು ಜಿಲ್ಲಾಡಳಿತ ಈಗಾಗಲೇ ಅವರನ್ನು ಬಂಧಿಸಬೇಕಿತ್ತು ಎಂದು ಕಿಡಿಕಾರಿದ್ದಾರೆ.
ಸಂಸದ ಪ್ರತಾಪ್ ಸಿಂಹ ತಮ್ಮ ರಾಜಕೀಯಕ್ಕಾಗಿ ಚಾಮುಂಡಿ ಚಲೋ ಕರೆ ನೀಡಿದ್ದಾರೆ. ನಾವು ಚಾಮುಂಡಿ ವಿರೋಧಿಗಳಲ್ಲ. ಪ್ರತಾಪ್ ಸಿಂಹ ಅವರಂತರಹ ಸಂಸದರನ್ನು ನಾನು ಕಂಡಿಲ್ಲ. ವೈಯಕ್ತಿಕ ದ್ವೇಷಕ್ಕಿಳಿಯುವುದು ನಮ್ಮ ಮನಸ್ಥಿತಿಯಲ್ಲ. ಹೀಗಾಗಿ ನಾವು ಯಾವ ಸಂಘರ್ಷಕ್ಕೂ ಇಳಿಯದೇ ಕಾರ್ಯಕ್ರಮ ಮಾಡುತ್ತೇವೆ ಎಂದರು.
ನಾವು ಬೇರೊಬ್ಬರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುವುದಿಲ್ಲ. ಅವರ ಪಾಡಿಗೆ ಅವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ, ನಾವು ನಮ್ಮ ಪಾಡಿಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…