ಮೈಸೂರು

ಮಹಿಷ ದಸರಾ ಮುಗಿಯೋವರೆಗೆ ಪ್ರತಾಪ್ ಸಿಂಹ ಅವರನ್ನು ಬಂಧಿಸಿ : ಮಾಜಿ ಮೇಯರ್ ಪುರುಷೋತ್ತಮ್

ಮೈಸೂರು : ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷಾ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಿತಿ ವತಿಯಿಂದ ಅವರನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇವೆ. ಇವರು ಸಂಘರ್ಷಕ್ಕೂ ಸಿದ್ದ ಎಂಬ ಪದ ಬಳಸಿದ್ದಾರೆ. ಅವರನ್ನು ಯಾರು ಸಂಘರ್ಷಕ್ಕೆ ಕರೆದಿದ್ದಾರೆ ಅವರೊಟ್ಟಿಗೆ ಸಂಘರ್ಷ ಮಾಡಲಿ. ಅವರ ಹೇಳಿಕೆ ನೋಡುತ್ತ ಕುಳಿತಿರುವ ಪೋಲಿಸರು ಮತ್ತು ಜಿಲ್ಲಾಡಳಿತ ಈಗಾಗಲೇ ಅವರನ್ನು ಬಂಧಿಸಬೇಕಿತ್ತು ಎಂದು ಕಿಡಿಕಾರಿದ್ದಾರೆ.

ಸಂಸದ ಪ್ರತಾಪ್ ಸಿಂಹ ತಮ್ಮ ರಾಜಕೀಯಕ್ಕಾಗಿ ಚಾಮುಂಡಿ ಚಲೋ ಕರೆ ನೀಡಿದ್ದಾರೆ. ನಾವು ಚಾಮುಂಡಿ ವಿರೋಧಿಗಳಲ್ಲ. ಪ್ರತಾಪ್ ಸಿಂಹ ಅವರಂತರಹ ಸಂಸದರನ್ನು ನಾನು ಕಂಡಿಲ್ಲ. ವೈಯಕ್ತಿಕ ದ್ವೇಷಕ್ಕಿಳಿಯುವುದು ನಮ್ಮ ಮನಸ್ಥಿತಿಯಲ್ಲ. ಹೀಗಾಗಿ ನಾವು ಯಾವ ಸಂಘರ್ಷಕ್ಕೂ ಇಳಿಯದೇ ಕಾರ್ಯಕ್ರಮ ಮಾಡುತ್ತೇವೆ ಎಂದರು.

ನಾವು ಬೇರೊಬ್ಬರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುವುದಿಲ್ಲ. ಅವರ ಪಾಡಿಗೆ ಅವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ, ನಾವು ನಮ್ಮ ಪಾಡಿಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago