ಮೈಸೂರು

ಹುಲಿ ಓಡಾಡುವ ನಕಲಿ (AI) ವಿಡಿಯೋ : ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಮಾರುಕಟ್ಟೆ ಬಳಿ ಹುಲಿ ಕಾಣಿಸಿಕೊಂಡಿದೆ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ಮತ್ತೊಬ್ಬರು ಚುಂಚನಹಳ್ಳಿ ಹನುಮನಪುರ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿ ಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಒಂದೇ ಪೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು ಇದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ :-Delhi : ಎನ್‌ಐಎ ತೆಕ್ಕೆಗೆ ಸ್ಫೋಟ ಕೇಸ್‌

ವಾಟ್ಸಾಪ್ ಸ್ಟೇಟಸ್ ಮತ್ತು ಫೇಸ್ಬುಕ್ ಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದು ಕಂಡುಬರುತ್ತಿದೆ. ಜನರಲ್ಲಿ ಭಯದ ವಾತಾವರಣವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಇಬ್ಬರ ಮೇಲೆ ದೂರು ದಾಖಲು ಮಾಡಲಾಗಿದೆ. ನಕಲಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

1 hour ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago