ಮೈಸೂರು: ಭಾರತೀಯ ಸೇನೆಯ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.೩೧ರಂದು ಬೆಳಿಗ್ಗೆ ೮ರಿಂದ ೧೦ರವೆರೆಗೆ ಭಾರತೀಯ ಸೇನಾ ಮಾಜಿ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಸ್ಮರಣಾರ್ಥ ವನ್ಯಜೀವಿಗಳ ಜಲಪಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಮಾಜಿ ಸೈನಿಕರಿಂದ ಚಾಮುಂಡಿಬೆಟ್ಟದ ರಸ್ತೆಗಳಲ್ಲಿ ಜೀವಿಸುವ ಪ್ರಾಣಿ ಹಾಗೂ ಪಕ್ಷಿಗಳಿಗೆ ನೀರಿನ ದಾಹವನ್ನು ನೀಗಿಸುವ ಸಲುವಾಗಿ ೨೦ ಸೀಮೆಂಟ್ ತೊಟ್ಟಿಗಳನ್ನು ರಸ್ತೆಗಳಲ್ಲಿ ಇರಿಸಲಾಗುವುದು ಎಂದರು.
ಪ್ರತಿ ಭಾನುವಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಅಲ್ಲಿನ ಗ್ರಾಮ ಪಂಚಾಯಿತಿಯವರು ಸೋಮವಾರದಿಂದ ಶನಿವಾರದವರೆಗೆ ಈ ಕಾರ್ಯವನ್ನು ನಿರ್ವಹಿಸಲು ತಿಳಿಸಲಾಗಿದೆ ಎಂದರು.
ಮೈಸೂರು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ನಂಜುಂಡಸ್ವಾಮಿ, ಉಪಾಧ್ಯಕ್ಷ ನೀಲಕಂಠ ಕುಮಾರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರಜಿನಿ ಸುಬ್ಬಯ್ಯ, ನಿರ್ದೇಶಕರಾದ ಕೋಮಲ ರಾವ್ ಹಾಗೂ ಲಕ್ಷ್ಮಿಪಾಟೀಲ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…