ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ ಕೂಡಿದ್ದು ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ವಿಶೇಷವಾಗಿ ನಾಳೆ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ.
ಜಗತ್ತಿನೆಲ್ಲೆಡೆ ಮನೆ ಮನೆಯಲ್ಲಿ ದೀಪಾವಳಿ ಸಂಭ್ರಮ ರಂಗೇರಲಿದ್ದು ಎರಡು ವರ್ಷದ ಬಳಿಕ ಹಬ್ಬವನ್ನು ಆಚರಿಸುತ್ತಿದ್ದಾರೆ. ದೀಪಾವಳಿ ಸಾಲಿನಲ್ಲಿ ಸಾಲು ಸಾಲು ಸರ್ಕಾರಿ ರಜೆ ಇದ್ದು, ಸಾಂಸ್ಕೃತಿಕ ನಗರಿ ಮೈಸೂರಿನೆಡೆಗೆ ಪ್ರವಾಸಿಗರ ದಂಡೇ ಹರಿದುಬಂದಿದೆ.
ಮೈಸೂರಿನತ್ತ ಪ್ರವಾಸಿಗರು ದೌಡಾಯಿಸಿದ್ದು ,ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಗಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಮಾಯಿಸಿದ್ದಾರೆ. ಪ್ರವಾಸಿಗರಿಂದ ಮೈಸೂರಿನ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…