ಮೈಸೂರು ; ಚಾಮುಂಡಿ ಬೆಟ್ಟದಲ್ಲಿ ೨ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭಿಷೇಕದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು. ಭಕ್ತರು ಸಹ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ಆಷಾಢ ಶುಕ್ರವಾರದ ಪ್ರಯುಕ್ತ ದೇವಾಲಯದಲ್ಲಿ ವಿವಿಧ ಬಗೆಯ ಹೂಗಳು, ಹಣ್ಣುಗಳು & ತರಕಾರಿಗಳಿಂದ ಅಲಂಕಾರ ಮಾಡಲಾಗಿತ್ತು. ಅಲ್ಲದೆ ನಾಗಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಕಂಗೊಳಿಸುತ್ತಿದ್ದು, ಭಕ್ತರು ಉತ್ಸವ ಮೂರ್ತಿಯ ಅಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇನ್ನು ಚಾಮುಂಡಿಬೆಟ್ಟಕ್ಕೆ ಇಂದು ಸಹ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದ್ದು, ಬೆಟ್ಟಕ್ಕೆ ಹೋಗಲು ಉಚಿತ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭಕ್ತರಿಗೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ತಾಯಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೆಟ್ಟಿಲುಗಳಿಂದಲೂ ಕೂಡ ಸಹಸ್ರಾರು ಭಕ್ತರು ಬೆಟ್ಟಕ್ಕೆ ಆಗಮಿಸುತ್ತಿದ್ದು, ಭಕ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮೂಲಭೂತ ಸೌಕರ್ಯಗಳನ್ನ ಒದಗಿಸಲಾಗಿದೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…