ಮೈಸೂರು

ಚಾ.ಬೆಟ್ಟ | ಆಷಾಢ ಮಾಸದ ಶುಕ್ರವಾರ 2 ಸಾವಿರ ರೂ.ಟಿಕೆಟ್ ಪಡೆದವರಿಗೆ ಗಿಫ್ಟ್ ಬಾಕ್ಸ್‌

ಶಿಷ್ಟಾಚಾರ ಹೊರತುಪಡಿಸಿ ಉಳಿದವರು ಸರತಿ ಸಾಲಿನಲ್ಲಿ ಪ್ರವೇಶ

ಮೈಸೂರು : ಆಷಾಢ ಮಾಸದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಚಾಮುಂಡೇಶ್ವರಿದೇವಿ ದರ್ಶನಕ್ಕೆ ಭಕ್ತಾದಿಗಳು ಆಗಮಿಸುವ ಕಾರಣ ಮೊದಲ ಬಾರಿಗೆ 2 ಸಾವಿರ ರೂ.ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, 2 ಸಾವಿರ ರೂ. ನೀಡಿ ಪ್ರವೇಶ ಪಡೆದವರಿಗೆ ಗಿಫ್ಟ್ ಬಾಕ್ಸ್ ನೀಡಲಾಗುತ್ತದೆ.

‌ ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಆಷಾಢ ಶುಕ್ರವಾರ ಮತ್ತು ಅಮ್ಮನವರ ವರ್ಧಂತಿ ಪೂರ್ವ ಸಿದ್ಧತಾ ಸಭೆಯಲ್ಲಿ ಆಷಾಢ ಮಾಸದಲ್ಲಿ ನೂಕುನುಗ್ಗಲು ತಡೆಯಲು ಮತ್ತು ನೇರವಾಗಿ ದರ್ಶನ ಪಡೆಯುವವರಿಗೆ ಅನುಕೂಲವಾಗುವಂತೆ ಪರಿಚಯಿಸಿರುವ 2 ಸಾವಿರ ರೂ.ಟಿಕೆಟ್ ವ್ಯವಸ್ಥೆಯನ್ನು ಪರಿಚಯಿಸುವ ಜತೆಗೆ,ಗಿಫ್ಟ್ ಬಾಕ್ಸ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಿಡುಗಡೆ ಮಾಡಿದರು.

ಆಷಾಢಮಾಸದ ಶುಕ್ರವಾರ ದೇವರ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಉಚಿತ ದರ್ಶನದ ಜತೆಗೆ 300 ರೂಪಾಯಿ ಟಿಕೆಟ್ ದರ್ಶನದ ವ್ಯವಸ್ಥೆ ಇತ್ತು. ಈ ಬಾರಿ ಹೆಚ್ಚುವರಿಯಾಗಿ 2 ಸಾವಿರ ರೂ. ಮುಖಬೆಲೆಯ ಟಿಕೆಟ್ ಪರಿಚಯಿಸಲಾಗಿದೆ. ಈ ಟಿಕೆಟ್ ಖರೀದಿ ಮಾಡಿದವರಿಗೆ ದರ್ಶನ ಜತೆಗೆ, ಕುಂಕುಮ, ಕೈಗೆ ಕಟ್ಟಿಕೊಳ್ಳುವ ದಾರ, ಚಾಮುಂಡೇಶ್ವರಿ ಫೋಟೋ, ಗಂಡಭೇರುಂಡ, ಅಂಬಾರಿ ಇರುವಂತಹ ಗಿಫ್ಟ್ ಬಾಕ್ಸ್‌ನ್ನು ಬಟ್ಟೆ ಬ್ಯಾಗ್‌ನಲ್ಲಿ ವಿತರಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ವಿಶೇಷ ಟಿಕೆಟ್ ಪಡೆದವರು ದರ್ಶನಕ್ಕಾಗಿ ಕಾಯುವ ಸಮಯ ಮೀರದಂತೆ ನೋಡಿಕೊಳ್ಳಲಾಗುವುದು. ಎರಡು ಸಾವಿರ ರೂ. ಕೊಟ್ಟು ದರ್ಶನ ನಿಧಾನವಾದರೆ ಸಮಸ್ಯೆಯಾಗಲಿದೆ. ಹಾಗಾಗಿ,ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಲಾಗಿದೆ ಎಂದರು. ‌

ಶಿಷ್ಠಾಚಾರ (ಪ್ರೊಟೋಕಾಲ್) ಇದ್ದವರನ್ನು ಹೊರತುಪಡಿಸಿ ಉಳಿದವರಿಗೆ ಪಾಸ್ ವ್ಯವಸ್ಥೆ ಇಲ್ಲದೆ ಸರತಿ ಸಾಲಿನಲ್ಲಿ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ವಿವಿಐಪಿ, ವಿಐಪಿ ಪಾಸ್‌ಗಳನ್ನು ವಿತರಿಸುವುದರಿಂದ ಗೊಂದಲ ಉಂಟಾಗಿ ಸರತಿ ಸಾಲಿನಲ್ಲಿ, ಟಿಕೆಟ್ ಪಡೆದುಕೊಂಡು ದರ್ಶನ ಪಡೆಯುವವರಿಗೂ ತೊಂದರೆಯಾಗುವ ಕಾರಣ ಶಿಷ್ಠಾಚಾರ ವ್ಯವಸ್ಥೆ ಹೊಂದಿದವರನ್ನು ಬಿಟ್ಟು ಉಳಿದವರು ಸರತಿ ಸಾಲಿನಲ್ಲೇ ತೆರಳಬೇಕಾಗಿದೆ. ಹೀಗಾಗಿ, ಜಿಲ್ಲಾಡಳಿತ ಮತ್ತು ನಗರ ಪೊಲೀಸ್ ಇಲಾಖೆ ಮೇಲೆ ಉಂಟಾಗುತ್ತಿದ್ದ ಒತ್ತಡಕ್ಕೂ ಕಡಿವಾಣ ಹಾಕಲಾಗಿದೆ.

ಈ ಬಾರಿ ವಿವಿಐಪಿ, ವಿಐಪಿ ಪಾಸ್‌ಗಳು ಅಥವಾ ವಾಹನದ ಪಾಸ್‌ಗಳು ಇರುವುದಿಲ್ಲ. ಸರ್ಕಾರದ ಶಿಷ್ಠಾಚಾರವನ್ನು ಹೊಂದಿರುವವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅಂತಹವರಿಗೆ ವಿನಾಯಿತಿ ಇರುತ್ತದೆ. ಉಳಿದಂತೆ ಬೇರೆ ಯಾವುದೇ ಪಾಸ್ ವ್ಯವಸ್ಥೆಗಳು ಇರುವುದಿಲ್ಲ ಎಂದರು.

ಸಾರ್ವಜನಿಕರ ಸಾಲು, ಟಿಕೆಟ್ ಸಾಲು, ವಿಐಪಿ ಸಾಲಿನಲ್ಲಿ ಗೊಂದಲವಾಗದಂತೆ, ಟಿಕೆಟ್ ಕೌಂಟರ್, ಸಾರಿಗೆ ಬಸ್‌ಗಳ ನಿರ್ಗಮನದ ಸ್ಥಳದಲ್ಲಿ ಉಸ್ತುವಾರಿ ನೋಡಿಕೊಳ್ಳಲು ಮೂವರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಇವರೆಲ್ಲರೂ ಸಂಪೂರ್ಣ ನಿಗಾವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

ಧಾರ್ಮಿಕ ಆಚರಣೆಗೆ ಧಕ್ಕೆಯಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಆಗದಂತೆ ನೋಡಿಕೊಳ್ಳಲಾಗುವುದು. ಪೊಲೀಸರು, ಅರ್ಚಕರ ಶಿ-ರಸ್ಸಿನಿಂದ ಒಳನುಗ್ಗುವ ಜನರ ಬಗ್ಗೆ ಕಡಿವಾಣ ಹಾಕಲಾಗುವುದು. ಪೊಲೀಸ್ ಇಲಾಖೆ,ಶ್ರೀ ಚಾಮುಂಡಿಬೆಟ್ಟ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ,ಅರ್ಚಕರು ಪರಸ್ಪರ ಸಮನ್ವತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗುವುದು ಎಂದರು.

ಶಾಸಕ ಜಿ.ಟಿ.ದೇವೇಗೌಡ,ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ,ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಪ್ರಾಽಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

6 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

8 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

9 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

9 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

10 hours ago