ಮೈಸೂರು

ಚಾ.ಬೆಟ್ಟ | ಆಷಾಢ ಮಾಸದ ಶುಕ್ರವಾರ 2 ಸಾವಿರ ರೂ.ಟಿಕೆಟ್ ಪಡೆದವರಿಗೆ ಗಿಫ್ಟ್ ಬಾಕ್ಸ್‌

ಶಿಷ್ಟಾಚಾರ ಹೊರತುಪಡಿಸಿ ಉಳಿದವರು ಸರತಿ ಸಾಲಿನಲ್ಲಿ ಪ್ರವೇಶ

ಮೈಸೂರು : ಆಷಾಢ ಮಾಸದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಚಾಮುಂಡೇಶ್ವರಿದೇವಿ ದರ್ಶನಕ್ಕೆ ಭಕ್ತಾದಿಗಳು ಆಗಮಿಸುವ ಕಾರಣ ಮೊದಲ ಬಾರಿಗೆ 2 ಸಾವಿರ ರೂ.ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, 2 ಸಾವಿರ ರೂ. ನೀಡಿ ಪ್ರವೇಶ ಪಡೆದವರಿಗೆ ಗಿಫ್ಟ್ ಬಾಕ್ಸ್ ನೀಡಲಾಗುತ್ತದೆ.

‌ ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಆಷಾಢ ಶುಕ್ರವಾರ ಮತ್ತು ಅಮ್ಮನವರ ವರ್ಧಂತಿ ಪೂರ್ವ ಸಿದ್ಧತಾ ಸಭೆಯಲ್ಲಿ ಆಷಾಢ ಮಾಸದಲ್ಲಿ ನೂಕುನುಗ್ಗಲು ತಡೆಯಲು ಮತ್ತು ನೇರವಾಗಿ ದರ್ಶನ ಪಡೆಯುವವರಿಗೆ ಅನುಕೂಲವಾಗುವಂತೆ ಪರಿಚಯಿಸಿರುವ 2 ಸಾವಿರ ರೂ.ಟಿಕೆಟ್ ವ್ಯವಸ್ಥೆಯನ್ನು ಪರಿಚಯಿಸುವ ಜತೆಗೆ,ಗಿಫ್ಟ್ ಬಾಕ್ಸ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಿಡುಗಡೆ ಮಾಡಿದರು.

ಆಷಾಢಮಾಸದ ಶುಕ್ರವಾರ ದೇವರ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಉಚಿತ ದರ್ಶನದ ಜತೆಗೆ 300 ರೂಪಾಯಿ ಟಿಕೆಟ್ ದರ್ಶನದ ವ್ಯವಸ್ಥೆ ಇತ್ತು. ಈ ಬಾರಿ ಹೆಚ್ಚುವರಿಯಾಗಿ 2 ಸಾವಿರ ರೂ. ಮುಖಬೆಲೆಯ ಟಿಕೆಟ್ ಪರಿಚಯಿಸಲಾಗಿದೆ. ಈ ಟಿಕೆಟ್ ಖರೀದಿ ಮಾಡಿದವರಿಗೆ ದರ್ಶನ ಜತೆಗೆ, ಕುಂಕುಮ, ಕೈಗೆ ಕಟ್ಟಿಕೊಳ್ಳುವ ದಾರ, ಚಾಮುಂಡೇಶ್ವರಿ ಫೋಟೋ, ಗಂಡಭೇರುಂಡ, ಅಂಬಾರಿ ಇರುವಂತಹ ಗಿಫ್ಟ್ ಬಾಕ್ಸ್‌ನ್ನು ಬಟ್ಟೆ ಬ್ಯಾಗ್‌ನಲ್ಲಿ ವಿತರಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ವಿಶೇಷ ಟಿಕೆಟ್ ಪಡೆದವರು ದರ್ಶನಕ್ಕಾಗಿ ಕಾಯುವ ಸಮಯ ಮೀರದಂತೆ ನೋಡಿಕೊಳ್ಳಲಾಗುವುದು. ಎರಡು ಸಾವಿರ ರೂ. ಕೊಟ್ಟು ದರ್ಶನ ನಿಧಾನವಾದರೆ ಸಮಸ್ಯೆಯಾಗಲಿದೆ. ಹಾಗಾಗಿ,ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಲಾಗಿದೆ ಎಂದರು. ‌

ಶಿಷ್ಠಾಚಾರ (ಪ್ರೊಟೋಕಾಲ್) ಇದ್ದವರನ್ನು ಹೊರತುಪಡಿಸಿ ಉಳಿದವರಿಗೆ ಪಾಸ್ ವ್ಯವಸ್ಥೆ ಇಲ್ಲದೆ ಸರತಿ ಸಾಲಿನಲ್ಲಿ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ವಿವಿಐಪಿ, ವಿಐಪಿ ಪಾಸ್‌ಗಳನ್ನು ವಿತರಿಸುವುದರಿಂದ ಗೊಂದಲ ಉಂಟಾಗಿ ಸರತಿ ಸಾಲಿನಲ್ಲಿ, ಟಿಕೆಟ್ ಪಡೆದುಕೊಂಡು ದರ್ಶನ ಪಡೆಯುವವರಿಗೂ ತೊಂದರೆಯಾಗುವ ಕಾರಣ ಶಿಷ್ಠಾಚಾರ ವ್ಯವಸ್ಥೆ ಹೊಂದಿದವರನ್ನು ಬಿಟ್ಟು ಉಳಿದವರು ಸರತಿ ಸಾಲಿನಲ್ಲೇ ತೆರಳಬೇಕಾಗಿದೆ. ಹೀಗಾಗಿ, ಜಿಲ್ಲಾಡಳಿತ ಮತ್ತು ನಗರ ಪೊಲೀಸ್ ಇಲಾಖೆ ಮೇಲೆ ಉಂಟಾಗುತ್ತಿದ್ದ ಒತ್ತಡಕ್ಕೂ ಕಡಿವಾಣ ಹಾಕಲಾಗಿದೆ.

ಈ ಬಾರಿ ವಿವಿಐಪಿ, ವಿಐಪಿ ಪಾಸ್‌ಗಳು ಅಥವಾ ವಾಹನದ ಪಾಸ್‌ಗಳು ಇರುವುದಿಲ್ಲ. ಸರ್ಕಾರದ ಶಿಷ್ಠಾಚಾರವನ್ನು ಹೊಂದಿರುವವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅಂತಹವರಿಗೆ ವಿನಾಯಿತಿ ಇರುತ್ತದೆ. ಉಳಿದಂತೆ ಬೇರೆ ಯಾವುದೇ ಪಾಸ್ ವ್ಯವಸ್ಥೆಗಳು ಇರುವುದಿಲ್ಲ ಎಂದರು.

ಸಾರ್ವಜನಿಕರ ಸಾಲು, ಟಿಕೆಟ್ ಸಾಲು, ವಿಐಪಿ ಸಾಲಿನಲ್ಲಿ ಗೊಂದಲವಾಗದಂತೆ, ಟಿಕೆಟ್ ಕೌಂಟರ್, ಸಾರಿಗೆ ಬಸ್‌ಗಳ ನಿರ್ಗಮನದ ಸ್ಥಳದಲ್ಲಿ ಉಸ್ತುವಾರಿ ನೋಡಿಕೊಳ್ಳಲು ಮೂವರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಇವರೆಲ್ಲರೂ ಸಂಪೂರ್ಣ ನಿಗಾವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

ಧಾರ್ಮಿಕ ಆಚರಣೆಗೆ ಧಕ್ಕೆಯಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಆಗದಂತೆ ನೋಡಿಕೊಳ್ಳಲಾಗುವುದು. ಪೊಲೀಸರು, ಅರ್ಚಕರ ಶಿ-ರಸ್ಸಿನಿಂದ ಒಳನುಗ್ಗುವ ಜನರ ಬಗ್ಗೆ ಕಡಿವಾಣ ಹಾಕಲಾಗುವುದು. ಪೊಲೀಸ್ ಇಲಾಖೆ,ಶ್ರೀ ಚಾಮುಂಡಿಬೆಟ್ಟ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ,ಅರ್ಚಕರು ಪರಸ್ಪರ ಸಮನ್ವತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗುವುದು ಎಂದರು.

ಶಾಸಕ ಜಿ.ಟಿ.ದೇವೇಗೌಡ,ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ,ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಪ್ರಾಽಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

13 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

13 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

13 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

14 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

14 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

14 hours ago