ಮೈಸೂರು

ಆಷಾಢ ಶುಕ್ರವರ : ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು.

ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ದರ್ಶನ ಪಡೆದು ಧನ್ಯರಾದರು. ಕೆಲವರು ಮೆಟ್ಟಿಲುಗಳ ಮೂಲಕ ಬಂದರೆ ಇನ್ನು ಕೆಲವರು ಸಾರಿಗೆ ಬಸ್‌ನಲ್ಲಿ ಬೆಟ್ಟಕ್ಕೆ ಆಗಮಿಸಿದರು. ಉಚಿತ ಪ್ರವೇಶ, 300 ರೂ, 2000 ರೂ. ಸರತಿ ಸಾಲಿನಲ್ಲಿ ನಿಂತು ಸಾವದಾನವಾಗಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಸರತಿ ಸಾಲಿನುದ್ದಕ್ಕೂ ಚಾಮುಂಡೇಶ್ವರಿಯ ಜಯಘೋಷಗಳು ಮೊಳಗಿದವು.

ಚಾಮುಂಡಿಬೆಟ್ಟಕ್ಕೆ ಉಚಿತ ಬಸ್‌ಗಳಲ್ಲಿ ಮಾತ್ರವಲ್ಲ, ಮೆಟ್ಟಿಲು ಮಾರ್ಗವಾಗಿ ಬರುವ ಭಕ್ತರ ಸಂಖ್ಯೆಯೂ ಅಧಿಕವಾಗಿತ್ತು. ಯುವತಿಯರು, ಗೃಹಿಣಿಯರು 1001 ಮೆಟ್ಟಿಲುಗಳಿಗೂ ಕುಂಕುಮ, ಅರಿಶಿಣ ಹಚ್ಚುತ್ತ ಮೆಟ್ಟಿಲು ಹತ್ತಿದರು. ಕೆಲವರು ಮಂಡಿಯಲ್ಲೇ ಮೆಟ್ಟಿಲುಗಳನ್ನು ಹತ್ತುವ ದೃಶ್ಯ ಭಕ್ತಿಭಾವದ ರೂಪಕದಂತಿತ್ತು.

ವಿಶೇಷ ಪೂಜೆ: ಮುಂಜಾನೆ ಮೂರು ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಶುದ್ಧಗೊಳಿಸಿ, ಬಳಿಕ ವಿಶೇಷವಾಗಿ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 5.30 ರಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಿಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ಅಭಿಷೇಕ ನೆರವೇರಿಸಲಾಯಿತು. ರಾತ್ರಿ 10 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದರ್ಶನದ ವೇಳೆ ಯಾವುದೇ ನೂಕು ನುಗ್ಗಲಿಗೆ ಅವಕಾಶವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ವಿಶೇಷ ಗಜಲಕ್ಷ್ಮಿ ಅಲಂಕಾರ: ಎಂದಿನಂತೆ ಮೂರನೇ ಆಷಾಢ ಶುಕ್ರವಾರವೂ ದೇವಾಲಯದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಚಾಮುಂಡೇಶ್ವರಿ ಬಿಳಿ, ನೇರಳೆ ಬಣ್ಣದ ಸೀರೆಯುಟ್ಟು ವಿಶೇಷ ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು. ದೇವಾಲಯದ ಇಡೀ ಆವರಣ ವಿಶೇಷ ಹೂವಿನ ಅಲಂಕಾರದಿಂದ ಆಕರ್ಷಕವಾಗಿತ್ತು. ಪ್ರವೇಶ ದ್ವಾರದಿಂದ ದೇವಸ್ಥಾನದ ಗರ್ಭಗುಡಿವರೆಗೆ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಆರ್ಕಿಡ್ ಹೂ, ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ನಾನಾ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಕಂಗೊಳಿಸುತ್ತಿತ್ತು. ಸಾರ್ವಜನಿಕರು ತಮ್ಮ ಮೊಬೈಲ್‌ಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಪ್ರಸಾದ ವಿತರಣೆ
ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಇಲಾಖೆಯ ಜಾಗದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಉಪ್ಪಿಟ್ಟು, ಕೇಸರಿಬಾತ್, ಬಾತ್, ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

17 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

27 mins ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

2 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

2 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago